ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ.
ನಂದವಾಡಗಿ ಜೂನ್.05

ಬಾಗಲಕೋಟೆ ಜಿಲ್ಲೆಯ ಇಲಕಲ್ಲ ತಾಲೂಕಿನ ನಂದವಾಡಗಿ ಗ್ರಾಮದ ಸರಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ನಂದವಾಡಗಿಯಲ್ಲಿ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಗಿಡ ನೆಡುವ ಮೂಲಕ ಆಚರಿಸಲಾಯಿತು. ಶಾಲೆಯ ಆವರಣದಲ್ಲಿ ಶಿಕ್ಷಕರ ವೃಂದ, ವಿದ್ಯಾರ್ಥಿನಿಯರು ಗಿಡಗಳನ್ನು ನೆಟ್ಟು ಹಸಿರೇ ಉಸಿರು ಎನ್ನುವ ಮಾತಿಗೆ ಸಾಕ್ಷಿಯಾದರು. ಶಾಲೆಯ ಪ್ರಭಾರಿ ಮುಖ್ಯ ಗುರುಮಾತೆ ಶ್ರೀಮತಿ ವಿ ಬಿ ಕುಂಬಾರ ಮಾತನಾಡಿ ಶಾಲೆಯ ಪರಿಸರವನ್ನು ಶುಚಿಯಾಗಿಡುವುದು ನಮ್ಮೆಲ್ಲರ ಜವಾಬ್ದಾರಿ, ಶಾಲೆಯ ಸುತ್ತಮುತ್ತ ಪರಿಸರವನ್ನು ಸ್ವಚ್ಛವಾಗಿಟ್ಟು ಕೊಂಡು ಉತ್ತಮ ವಾತಾವರಣ ಕಲ್ಪಿಸುವಲ್ಲಿ ನಮ್ಮೆಲ್ಲರ ಪಾತ್ರ ಬಹಳ ದೊಡ್ಡದು. ಪರಿಸರ ಶುಚಿತ್ವ ಮಹತ್ವ ಗಿಡ ಬೆಳಿಸಿ ನಾಡು ಉಳಿಸಿ, ಗಿಡಮರ ಸಂರಕ್ಷಣೆ ಹಲವಾರು ವಿಷಯ ಬಗ್ಗೆ ಮಾತನಾಡಿ ಜಾಗೃತಿ ಮೂಡಿಸಿದರು. ವಿಶ್ವ ದಿನಾಚರಣೆಯ ಕುರಿತು ಪ್ರಬಂಧ, ಚಿತ್ರಕಲಾ, ಭಾಷಣ, ಗಾಯನ ಸ್ಪರ್ಧೆ ಏರ್ಪಡಿಸಲಾಯಿತು. ಕಾರ್ಯಕ್ರಮದಲ್ಲಿ ಸಹ ಶಿಕ್ಷಕಿಯರು ಶ್ರೀಮತಿ ಜ್ಯೋತಿ, ಶ್ರೀಮತಿ ಜಿ ಆರ್ ನದಾಫ್, ಕು ಅಶ್ವಿನಿ ಕಪ್ಪರದ ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಕಾರ್ಯಕ್ರಮದ ನಿರೂಪಣೆ ಸಹ ಶಿಕ್ಷಕರು ಬಸವರಾಜ ಬಲಕುಂದಿ ನಿರ್ವಹಿಸಿದರು, ಡಾ ವಿಶ್ವನಾಥ ತೋಟಿ ಸ್ವಾಗತಿಸಿದರು, ಶ್ರೀ ಚಂದ್ರಶೇಖರ ಹುತಗಣ್ಣ, ಪರಿಸರ ದಿನಾಚರಣೆ ಕುರಿತು ಮಾತನಾಡಿ ವಂದಿಸಿದರು.
ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಪ್ರತಾಪ್. ವಾಯ್. ಕಿಳ್ಳಿ. ಇಲಕಲ್ಲ.