ರಾಜ್ಯ ಮಟ್ಟದ ಜಂಟಿ ಸಮಾಲೋಚನಾ ಸಮಿತಿಗೆ ಆಯ್ಕೆ.

ಕೊಟ್ಟೂರು ಜು.16

ಕರ್ನಾಟಕ ಸರ್ಕಾರದ ರಾಜ್ಯಮಟ್ಟದ ಜಂಟಿ ಸಮಾಲೋಚನಾ ಸಮಿತಿಯನ್ನು ಎರಡು ವರ್ಷಗಳ ವರೆಗೆ ಪುನರ್ ರಚಿಸಿ ಆದೇಶ ಹೊರಡಿಸಲಾಗಿದೆ. ಈ ಹಿಂದೆ ರಚಿಸಿದ ಸಮಿತಿಯ ಅವಧಿ ದಿನಾಂಕ ೦೫-೧೨-೨೦೨೧ ಕ್ಕೆ ಪೂರ್ಣ ಗೊಂಡಿರುವುದರಿಂದ ಸಮಿತಿಗೆ ನೂತನವಾಗಿ ಸದಸ್ಯ ಕಾರ್ಯದರ್ಶಿಗಳೂ ಸೇರಿದಂತೆ ನೂತನ ಸದಸ್ಯರನ್ನು ನೇಮಕ ಗೊಳಿಸಿ ರಾಜ್ಯ ಮಟ್ಟದ ಜಂಟಿ ಸಮಾಲೋಚನಾ ಸಮಿತಿಯನ್ನು ಪುನರ್ ರಚಿಸಲಾಗಿದೆ. ಈ ಸಮಿತಿಯಲ್ಲಿ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕರ ಆಪ್ತ ಸಹಾಯಕರೂ ಹಾಗೂ ರಾಜ್ಯ ಗ್ರಾಮ ಆಡಳಿತಾಧಿಕಾರಿಗಳ ಸಂಘದ ರಾಜ್ಯ ಅಧ್ಯಕ್ಷರೂ ಆದ ಬಿ. ದೊಡ್ಡಬಸಪ್ಪ ರೆಡ್ಡಿ ಅವರನ್ನು ಸೇರಿಸಿ ಸರ್ಕಾರ ಆದೇಶಿಸಿದೆ. ಸರ್ಕಾರದ ಆದೇಶ ಸಂಖ್ಯೆ ಜಿಎಡಿ ೭ ಡಿಎಸ್‌ಡಬ್ಲ್ಯೂ ೬೯ ದಿನಾಂಕ ೧೯-೧೦-೧೯೭೨ ರಂತೆ ಈ ಜಂಟಿ ಸಮಾಲೋಚನಾ ಸಮಿತಿಯು ಎರಡು ವರ್ಷಗಳ ವರೆಗೆ ಅಥವಾ ಮುಂದಿನ ಆದೇಶದ ವರೆಗೆ ಕಾರ್ಯ ನಿರ್ವಹಿಸಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಕರ್ನಾಟಕ ರಾಜ್ಯದ ರಾಜ್ಯ ಮಟ್ಟದ ಜಂಟಿ ಸಮಾಲೋಚನಾ ಸಮಿತಿಯಲ್ಲಿ ದೊಡ್ಡಬಸಪ್ಪ ರೆಡ್ಡಿ ಅವರು ಆಯ್ಕೆ ಯಾಗಿರುವುದು ಈ ಭಾಗದ ಜನರಿಗೆ ಸಂತಸವನ್ನು ಉಂಟು ಮಾಡಿದೆ. ಈ ಸಂದರ್ಭದಲ್ಲಿ ಕೊಟ್ರೇಶ್, ಅಂಜಿನಿ, ಪಿ ಚಂದ್ರಶೇಖರ್, ಪ್ರವೀಣ್, ಮಧು ನಾಯ್ಕ್ ಮತ್ತಿತರರು ಉಪಸ್ಥಿತರಿದ್ದರು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಪ್ರದೀಪ್ ಕುಮಾರ್ ಸಿ ಕೊಟ್ಟೂರು.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button