ಲೋಕಸಭಾ ಅಭ್ಯರ್ಥಿ ತುಕಾರಾಮ್ ಅವರ ಗೆಲುವಿನ ಸಂಭ್ರಮಾಚರಣೆ ಕೂಡ್ಲಿಗಿಯ ರಾಜೀವ್ ಗಾಂಧಿನಗರ.

ಕೂಡ್ಲಿಗಿ ಜೂನ್.05

ಬಳ್ಳಾರಿ ಲೋಕಸಭಾ ಕ್ಷೇತ್ರದ ಜಿದ್ದಾ ಜಿದ್ದಿನ ಕಣವಾಗಿ ಏರ್ಪಟ್ಟಿದ್ದ ಲೋಕಸಭಾ ಅಭ್ಯರ್ಥಿ ಈ ತುಕಾರಾಮ್ ಅವರು ಗೆಲುವು ಸಾಧಿಸಿರುವುದು ಎಲ್ಲ ಕಾರ್ಯಕರ್ತರಿಗೆ ಅತೀವ ಸಂತೋಷವನ್ನುಂಟು ಮಾಡಿದೆ ಕಾಂಗ್ರೆಸ್ ಪಕ್ಷದ ಎಲ್ಲಾ ಕಾರ್ಯಕರ್ತರು ಮತ್ತು ಪದಾಧಿಕಾರಿಗಳು ಒಗ್ಗಟ್ಟಿನಿಂದ ಕೆಲಸ ಮಾಡಿ ಮತ್ತು ಶಾಸಕರ ನಿರ್ದೇಶನದಂತೆ ಕೆಲಸ ಮಾಡಿ ಈ ತುಕಾರಾಮ್ ಅವರ ಗೆಲುವಿಗೆ ಮುನ್ನುಡಿಯನ್ನು ಬರೆದಿದ್ದಾರೆ ಕೂಡ್ಲಿಗಿ ರಾಜೀವ್ ಗಾಂಧಿನಗರದ ಕಾರ್ಯಕರ್ತರು ಪಟಾಕಿ ಸಿಡಿಸುವುದರ ಮೂಲಕ ಎಲ್ಲಾ ಕಾರ್ಯಕರ್ತರು ಸಂಭ್ರಮಾಚರಣೆಯನ್ನು ಆಚರಿಸಿದರು ಈ ಸಂದರ್ಭದಲ್ಲಿ ಕಾಲ್ಚಟ್ಟಿ ಕೃಷ್ಣ ಮಾತನಾಡಿ ನಮ್ಮ ಶಾಸಕರ ಸಲಹೆಯಂತೆ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಿ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಜಯಭೇರಿ ಬಾರಿಸಿರುವುದು ಅತೀವ ಸಂತೋಷವನ್ನುಂಟು ಮಾಡಿದೆ ಎಂದರು. ಒಗ್ಗಟ್ಟಿನಲ್ಲಿ ಬಲವಿದೆ ಎನ್ನುವುದನ್ನು ಈ ಬಾರಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕೆಲಸ ಮಾಡಿ ತೋರಿಸಿ ಕೊಟ್ಟಿದ್ದೇವೆ ಎಂದು ಕಾರ್ಯಕರ್ತರು ಮಾತನಾಡಿದರು. ಇದೇ ರೀತಿಯಾಗಿ ಮುಂದಿನ ದಿನಗಳಲ್ಲಿ ಸರ್ವತೋಮುಖ ಅಭಿವೃದ್ಧಿಗೆ ಲೋಕಸಭಾ ಸದಸ್ಯರನ್ನು ಕೂಡ್ಲಿಗಿ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುವಂತೆ ನಾವು ಜೊತೆಗೂಡಿ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತೇವೆ ಎಂದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಕಾಲ್ ಚಟ್ಟಿ ಕೃಷ್ಣಪ್ಪ ನಾಗೇಂದ್ರ ರಾಜೀವ್ ಗಾಂಧಿನಗರ ಕಾಂಗ್ರೆಸ್ ಪಕ್ಷದ ಪಟ್ಟಣ ಪಂಚಾಯಿತಿ ಪರಾಜಿತ ಅಭ್ಯರ್ಥಿ ವ್ಯವಸಾಯ ಸೇವಾ ಸಹಕಾರ ಸಂಘ ಕೂಡ್ಲಿಗಿ ನಿರ್ದೇಶಕರು ಆದ ನಲ್ಲ ಮುತ್ತಿ ದುರ್ಗೇಶ್ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ನವೀನ್ ತಾಲೂಕು ಉಪಾಧ್ಯಕ್ಷ ಕಾಂಗ್ರೆಸ್ ಸೇವೆದಳ ಜಿಂಕಲರ್ ನಾಗೇಶ್ ಮುಖಂಡರಾದ ಸೀನಣ್ಣ ತಿಮ್ಮಪ್ಪ ಸಿದ್ದಪ್ಪ ನಿಂಗಜ್ಜ ಇನ್ನೂ ಹೆಚ್ಚು ಕಾಂಗ್ರೆಸ್ ಮುಖಂಡರು ಹಾಜರಿದ್ದರು.

ಹೋಬಳಿ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಕೆ.ಎಸ್.ವೀರೇಶ್. ಕಾನಾ ಹೊಸಹಳ್ಳಿ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Your email address will not be published. Required fields are marked *

Back to top button