ಬೇಸಿಗೆ ಶಿಬಿರ ಮಕ್ಕಳ ಬೌದ್ಧಿಕ ಸಾಮರ್ಥ್ಯ ಹೆಚ್ಚಿಸುತ್ತಿದೆ – ಅಮರೇಶ್ ನಾಯಕ.
ಗಂಜಿಹಾಳ ಜೂನ್.07

ಆರಾಧ್ಯ ಸಂಸ್ಥೆಯ ತಮ್ಮ ಸ್ವಂತ ಹಣದಿಂದ ಬೇಸಿಗೆ ಶಿಬಿರ ನಡೆಸುತ್ತಿರುವುದು ಖುಷಿ ವಿಚಾರ, ಇದನ್ನು ಮುಂದುವರೆಸಿ ಕೊಂಡು ಹೋಗಬೇಕು ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಅಮರೇಶ್ ನಾಯಕ ತಿಳಿಸಿದರು.ಹುನಗುಂದ ತಾಲೂಕಿನ ಗಂಜಿಹಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜರುಗಿದ ಆರಾಧ್ಯ ಸಂಸ್ಥೆಯ ಗ್ರಾಮೀಣ ಬೇಸಿಗೆ ಶಿಬಿರ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಬೇಸಿಗೆ ಮಕ್ಕಳು ಬೌದ್ಧಿಕ ಸಾಮರ್ಥ್ಯ ಹೆಚ್ಚಿಸಲು ಅನುಕೂಲವಾಗಲಿದೆ. ಆರಾಧ್ಯ ಸಂಸ್ಥೆಯ ಸ್ವಂತ ಹಣದಿಂದ ಬೇಸಿಗೆ ಶಿಬಿರ ನಡೆಸುತ್ತಿರುವುದು ಖುಷಿ ವಿಚಾರ, ಇದನ್ನು ಮುಂದುವರೆಸಿ ಕೊಂಡು ಹೋಗಬೇಕು ಎಂದು ತಿಳಿಸಿದರು.ಬಳಿಕ ಮಾತನಾಡಿದ ಕಾರ್ಯ ನಿರ್ವಾಹಕ ಅಧಿಕಾರಿ ತಾರಾ ಎನ್, 15 ದಿನಗಳ ಕಾಲ ಜರುಗಿದ ಬೇಸಿಗೆ ಶಿಬಿರವೂ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಲಿದೆ. ಮಕ್ಕಳ ಮುಂದಿನ ಕಲಿಕೆಗೆ ಪೂರಕವಾಗಲಿದೆ ಎಂದರು.ಇನ್ನು 15 ದಿನಗಳ ಕಾಲ ಜರುಗಿದ ಶಿಬಿರದಲ್ಲಿ ವಿವಿಧ ಚಟುವಟಿಕೆಗಳ ಮೂಲಕ ಮಕ್ಕಳ ಬೌದ್ಧಿಕ ಸಾಮರ್ಥ್ಯ ಹೆಚ್ಚಿಸಲಾಯಿತು. ಈ ಶಿಬಿರದಲ್ಲಿ ಭಾಗಿಯಾದ ಮಕ್ಕಳಿಗೆ ಪ್ರಶಂಸನಾ ಪತ್ರವನ್ನು ಉಪ ಕಾರ್ಯದರ್ಶಿಗಳು ಹಾಗೂ ಕಾರ್ಯ ನಿರ್ವಾಹಕ ಅಧಿಕಾರಿಗಳು ವಿತರಿಸಿದರು.ಬಳಿಕ ಉಪ ಕಾರ್ಯದರ್ಶಿಗಳಿಗೆ ಹಾಗೂ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಆರಾಧನಾ ಸಂಸ್ಥೆಯಿಂದ ಸನ್ಮಾನಿಸಲಾಯಿತು. ಬಳಿಕ ಉಪ ಕಾರ್ಯದರ್ಶಿಗಳು ಶಾಲಾ ಆವರಣದಲ್ಲಿ ಸಸಿ ನೆಟ್ಟು ನೀರುಣಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್ ಎಸ್ ಅದಾಲಟ್ಟಿ , ಐಇಸಿ ಸಂಯೋಜಕ ಬಸವರಾಜ ಕೊಪ್ಪದ , ತಾಲೂಕ ಕಾರ್ಯಕ್ರಮ ವ್ಯವಸ್ಥಾಪಕ ಕೃಷ್ಣಾಜಿ ಪವಾರ್ , ಆರಾಧ್ಯ ಸಂಸ್ಥೆಯ ನಿರ್ದೇಶಕ ವಿಜಯ ಮಹಾಂತೇಶ್ ಕೆ. ಮಲಗಿಹಾಳ, ಶಾಲಾ ಮುಖ್ಯ ಶಿಕ್ಷಕರು, ಡಾಟಾ ಎಂಟ್ರಿ ಆಪರೇಟರ್ ಯಮನಪ್ಪ ಮ್ಯಾಗೇರಿ, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ, ಅತಿಥಿ ಶಿಕ್ಷಕರು, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.