ಉಚಿತ ಪಠ್ಯ ಪುಸ್ತಕ, ಸಮವಸ್ತ್ರ ವಿತರಣೆ.
ನಂದವಾಡಗಿ ಜೂನ್.13

ಬಾಗಲಕೋಟೆ ಜಿಲ್ಲೆಯ ಹುನಗುಂದ / ಇಲಕಲ್ ತಾಲೂಕಿನ ಸರಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ನಂದವಾಡಗಿಯಲ್ಲಿ ೨೦೨೪-೨೫ ನೇ ಶೈಕ್ಷಣಿಕ ಸಾಲಿನ ಒಂದರಿಂದ ಏಳನೇ ತರಗತಿಯವರೆಗಿನ ವಿದ್ಯಾರ್ಥಿನಿಯರಿಗೆ ಸರಕಾರದ ಯೋಜನೆಗಳಾದ ಉಚಿತ ಪಠ್ಯ ಪುಸ್ತಕ ಹಾಗೂ ಎರಡು ಜೊತೆ ಸಮವಸ್ತ್ರವನ್ನು ಶಾಲಾ ಎಸ್ ಡಿ ಎಂ ಸಿ ಹಾಗೂ ಶಿಕ್ಷಕ ವೃಂದ ವಿತರಣೆ ಮಾಡಿದರು. ಕಾರ್ಯಕ್ರಮದ ಪ್ರಾಸ್ತಾವಿಕವಾಗಿ ಶಾಲಾ ಮುಖ್ಯ ಗುರುಮಾತೆ ಶ್ರೀಮತಿ ವಿ ಬಿ ಕುಂಬಾರ ಮಾತನಾಡಿ, ಸರಕಾರಿ ಶಾಲೆಗಳಿಗೆ ಸರಕಾರವು ಅನೇಕ ಯೋಜನೆ, ಸೌಲಭ್ಯ ನೀಡುತ್ತದೆ. ಸರಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಶಿಕ್ಷಣ ಪ್ರಗತಿಗಾಗಿ ಇಂತಹ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದೆ, ನೀವೆಲ್ಲರೂ ಇದರ ಸದುಪಯೋಗ ಪಡೆದುಕೊಂಡು ಉತ್ತಮ ವಿದ್ಯಾರ್ಥಿಗಳಾಗಿ ಹೊರ ಹೊಮ್ಮಬೇಕು. ಈ ಶೈಕ್ಷಣಿಕ ಬಲವರ್ಧನೆ ವರ್ಷವನ್ನು ಯಶಸ್ವಿ ಗೊಳಿಸಲು ತಾವೆಲ್ಲರೂ ಕಲಿಕಾ ಪ್ರಕ್ರಿಯೆಯಲ್ಲಿ ತೊಡಗಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಶ್ರೀ ಶರಣಪ್ಪ ವಗ್ಗರ, ಎಸ್ ಡಿ ಎಂ ಸಿ ಸದಸ್ಯರು ಶ್ರೀ ವೀರಭದ್ರಯ್ಯ ಮಠರವರು ಭಾಗವಹಿಸಿ ಶಾಲೆಗೆ ಎರಡು ವೈಟ್ ಬೋರ್ಡ್ ಕೊಡುಗೆಯಾಗಿ ನೀಡಿದರು. ಶ್ರೀ ಬಸವರಾಜ ಮಲ್ಲನಗೌಡರ, ಎಸ್ ಡಿ ಎಂ ಸಿ ಸದಸ್ಯರು, ಶಾಲಾ ಶಿಕ್ಷಕ ವೃಂದ ಶ್ರೀಮತಿ ಜ್ಯೋತಿ, ಶ್ರೀಮತಿ ಜಿ ಆರ್ ನದಾಫ್, ಬಸವರಾಜ ಬಲಕುಂದಿ, ಡಾ. ವಿಶ್ವನಾಥ ತೋಟಿ, ಶ್ರೀ ಚಂದ್ರಶೇಖರ ಹುತಗಣ್ಣ,ಕುಮಾರಿ ಅಶ್ವಿನಿ ಕಪ್ಪರದ ವಿದ್ಯಾರ್ಥಿನಿಯರಿಗೆ ಶುಭ ಕೋರಿದರು. ಕಾರ್ಯಕ್ರಮದ ನಿರೂಪಣೆ ಸಹ ಶಿಕ್ಷಕರಾದ ಬಸವರಾಜ ಬಲಕುಂದಿ ನಿರ್ವಹಿಸಿದರು, ಶ್ರೀ ಚಂದ್ರಶೇಖರ ಹುತಗಣ್ಣ ವಂದಿಸಿದರು.
ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಪ್ರತಾಪ್.ವಾಯ್.ಕಿಳ್ಳಿ ಇಲಕಲ್ಲ