ರಾಜ್ಯಾಧ್ಯಕ್ಷರಾಗಿ ಎರಡನೇ ಬಾರಿಗೆ ದೊಡ್ಡಬಸಪ್ಪ ರೆಡ್ಡಿ.
ಕೊಟ್ಟೂರು ಜೂನ್.18
![](https://i0.wp.com/sknewskannada.in/wp-content/uploads/2024/06/IMG-20240618-WA00011.jpg?resize=708%2C399&ssl=1)
ಹಾವೇರಿ ಜಿಲ್ಲೆಯ ರಾಣೇಬೆನ್ನೂರುನಲ್ಲಿ ಕರೆದ ರಾಜ್ಯ ಕಾರ್ಯಕಾರಣಿ ಸಭೆಯ ಅಚ್ಚುಕಟ್ಟಾದ ನಿರ್ವಹಣೆಗಾಗಿ ಹಾವೇರಿ ಜಿಲ್ಲಾಧ್ಯಕ್ಷರು ಹಾಗೂ ಹಾವೇರಿ ಜಿಲ್ಲೆಯ ಸಮಸ್ತ ಗ್ರಾಮ ಆಡಳಿತ ಅಧಿಕಾರಿಗಳಿಗೆ ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಸಂಘಟನಾತ್ಮಕ ಸೇವಾ ಮನೋಭಾವ ದಿಂದ ಮತ್ತೊಮ್ಮೆ ಮಾತೃ ಸಂಘದ ಗತ ವೈಭವವನ್ನು ಸಾರುವ ನಿಟ್ಟಿನಲ್ಲಿ ಮತ್ತೊಮ್ಮೆ ರಾಜ್ಯ ಅಧ್ಯಕ್ಷರಾಗಿ ಮುಂದುವರೆಯಲು ಅವಕಾಶ ನೀಡಿ ಸೇವೆ ಸಲ್ಲಿಸಲು ಅನುವು ಮಾಡಿಕೊಟ್ಟ ಸಂಘದ ಇತಿಹಾಸದಲ್ಲಿ ಈ ದಿನವನ್ನು ಅಚ್ಚಳಿಯದಂತೆ ಛಾಪು ಮೂಡಿಸುವ ಎಲ್ಲಾ ರಾಜ್ಯಧ್ಯಕ್ಷರಿಗೂ ಹೃತ್ಪೂರ್ವಕ ಧನ್ಯವಾದಗಳು ಸಲ್ಲಿಸುತ್ತೇನೆ. ಕಾರ್ಯಕಾರಣಿ ಸಭೆಗೆ ಆಗಮಿಸಿದ ತಮ್ಮ ಸಂಘಟನಾ ಬದ್ಧತೆಯನ್ನು ತೋರಿದ ರಾಜ್ಯ ಸಂಘದ ಪದಾಧಿಕಾರಿಗಳು ಜಿಲ್ಲಾ ಸಂಘದ ಪದಾಧಿಕಾರಿಗಳು ತಾಲೂಕು ಅಧ್ಯಕ್ಷರು ತಾಲೂಕು ಪದಾಧಿಕಾರಿಗಳು ಹಾಗೂ ಸಮಸ್ತ ಗ್ರಾಮ ಆಡಳಿತ ಅಧಿಕಾರಿಗಳಿಗೆ ತುಂಬು ಹೃದಯದ ಧನ್ಯವಾದಗಳು ಸಲ್ಲಿಸುತ್ತೇನೆ ಎಂದು ಎರಡನೇ ಬಾರಿಗೆ ರಾಜ್ಯಾಧ್ಯಕ್ಷರಾದ ದೊಡ್ಡಬಸಪ್ಪ ರೆಡ್ಡಿ ಇವರು ತಿಳಿಸಿದರು.
ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಪ್ರದೀಪ್ ಕುಮಾರ್ ಸಿ. ಕೊಟ್ಟೂರು.