ನಾಳೆ ಸಿಂದಗಿಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ.
ಸಿಂದಗಿ ಜೂನ್.19
![](https://i0.wp.com/sknewskannada.in/wp-content/uploads/2024/06/IMG-20240619-WA0032.jpg?resize=708%2C472&ssl=1)
ಸಿಂದಗಿ ಮಂಡಲ ವತಿಯಿಂದ ರಸ್ತಾ ರೋಖೋ ಪ್ರತಿಭಟನೆ ಹಮ್ಮಿಕೊಂಡಿದ್ದು ಬಿಜೆಪಿಯ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರು ತಾಲೂಕ ಪಂಚಾಯಿತಿಯ ಮಾಜಿ ಸದಸ್ಯರು ಪುರಸಭೆಯ ಸದಸ್ಯರು ವಿಜಯಪುರ ಜಿಲ್ಲಾ ಮತ್ತು ರಾಜ್ಯ ಪದಾಧಿಕಾರಿಗಳು ಹಾಗೂ ಬೂತ್ ಮಟ್ಟದ ಅಧ್ಯಕ್ಷರು ಬಿಜೆಪಿಯ ಎಲ್ಲಾ ಮೋರ್ಚಾದ ಅಧ್ಯಕ್ಷರು ತಾಲೂಕಾ ಪದಾಧಿಕಾರಿಗಳು ಹಾಗೂ ಮಟ್ಟದ ಪದಾಧಿಕಾರಿಗಳು ಬಿಜೆಪಿ ಕಾರ್ಯಕರ್ತರಿಗೆ ಈ ಮೂಲಕ ತಮಗೆ ತಿಳಿಸುವುದೇನೆಂದರೆ ನಾಳೆ ಅಂದ್ರೇ 20.6.24 ಗುರುವಾರ ಬೆಳಗ್ಗೆ 10 ಗಂಟೆಗೆ ಅಂಬೇಡ್ಕರ್ ಸರ್ಕಲ್ ದಲ್ಲಿ ರಸ್ತಾ ರೋಖಾ ಹೋರಾಟ ಮಾಡಲಾಗುವುದು ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಿದ್ದರಿಂದ ಹಾಗೂ ರಾಜ್ಯದಲ್ಲಿನ ಕಾನೂನ ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ವಾಲ್ಮೀಕಿ ನಿಗಮದ ಹಗರಣದ ವಿರುದ್ಧ ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ ತಾಲ್ಲೂಕ ಬಿಜೆಪಿ ಮಂಡಲ ವತಿಯಿಂದ ಬ್ರಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಈ ಪ್ರತಿಭಟನೆ ಯನ್ನು ಮಾಜಿ ಶಾಸಕರಾದ ಶ್ರೀ ರಮೇಶ_ಭೂಸನೂರ ಅವರು ನೇತೃತ್ವ ವಹಿಸಲಿದ್ದಾರೆ ಆದಕಾರಣ ಎಲ್ಲರೂ ಆಗಮಿಸಿ ಈ ಬೃಹತ್ ಪ್ರತಿಭಟನೆಯನ್ನು ಯಶಸ್ವಿ ಗೊಳಿಸಬೇಕಾಗಿ ಎಂದು ತಾಲ್ಲೂಕ ಬಿಜೆಪಿ ಮಂಡಲ ಅಧ್ಯಕ್ಷರಾದ ಸಂತೋಷ ಪಾಟೀಲ ಡಂಬಳ ಅವರು ತಿಳಿಸಿದರು.
ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಭೀಮಪ್ಪ. ಹಚ್ಯಾಳ. ದೇವರ ಹಿಪ್ಪರಗಿ.