ಎಸ್.ಡಿ.ಎಂ.ಸಿ ಸದಸ್ಯರಿಂದ ವಿದ್ಯಾರ್ಥಿಗಳಿಗೆ ವಿಶೇಷ ಸನ್ಮಾನ.

ತೊದಲಬಾಗಿ ಆ.31

ಜಮಖಂಡಿ ತಾಲೂಕಿನ ತೊದಲಬಾಗಿ ಗ್ರಾಮದಲ್ಲಿ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ತೊದಲಬಾಗಿಯಲ್ಲಿ ವಲಯ ಮಟ್ಟದ ಗಣಿತ ಕಲಿಕಾ ಆಂದೋಲನ ನಡೆದಿರುತ್ತದೆ. ಗಣಿತ ವಲಯ ಮಟ್ಟದ ಕಲಿಕಾ ಆಂದೋಲನದಲ್ಲಿ ಭಾಗವಹಿಸಿ 4 ಮತ್ತು 5 ನೇ. ತರಗತಿಯಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ರವೀಂದ್ರ ಹರಿಜನ್ ವಸ್ತಿ ಶಾಲೆ ತೊದಲಬಾಗಿ ಪ್ರಥಮ ಸ್ಥಾನವನ್ನು ಪಡೆದು ಕೊಂಡಿದೆ. ನಾಲ್ಕನೇ ತರಗತಿಯ ವಿದ್ಯಾರ್ಥಿ ಐಶ್ವರ್ಯ ಶಿವಶಂಕರ ಅಡಿಹುಡಿ ಮತ್ತು 5 ನೇ. ತರಗತಿ ವಿದ್ಯಾರ್ಥಿ ಚನ್ನಪ್ಪ ಸಾಬು ಮಾಳಿ ಈ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದು ಕೊಂಡಿದ್ದಾರೆ.ಈ ಶಾಲೆಯ ಮುಖ್ಯ ಗುರುಗಳಾದಂತ ಶ್ರೀ ಎಸ್.ಬಿ ಸಿದ್ಧರೆಡ್ಡಿರವರು ಮಾತನಾಡಿದರು ಗಣಿತ ಕಲಿಕಾ ಆಂದೋಲನ ಸ್ಪರ್ಧೆಗಳಿಂದ ವಿದ್ಯಾರ್ಥಿಗಳ ಕಲಿಕಾ ಉತ್ಸಾಹ ಹೆಚ್ಚಳವಾಗಿ ವಿದ್ಯಾರ್ಥಿಗಳ ಬೌದ್ಧಿಕ ಮಟ್ಟ ವೃದ್ಧಿಯಾಗಲು ನೆರವಾಗುತ್ತದೆ, ಗಣಿತ ಎಂದರೆ ಕಬ್ಬಿಣದ ಕಡಲೆ ಎನ್ನುವ ಅಭಿಪ್ರಾಯ ಸಾಮಾನ್ಯವಾಗಿದೆ. ತರಗತಿಯಲ್ಲಿ ಗಣಿತ ವಿಷಯವನ್ನು ಪರಿಣಾಮಕಾರಿಯಾಗಿ ಮತ್ತು ಸರಳವಾಗಿ ಬೋಧಿಸುವ ಕುರಿತು ಶಿಕ್ಷಕರಿಂದ ನಿರಂತರ ಪ್ರಯತ್ನ ನಡೆಯ ಬೇಕು ಇಂತಹ ಕಲಿಕೆ ಆಂದೋಲನ ದಿಂದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪ್ರಯೋಜನವಾಗಲಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಸಹ ಶಿಕ್ಷಕರಾದ ಎಲ್.ಎಸ್ ನಾಗನೇಶ್ವರ್, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ರಾಜೇಂದ್ರ ಕಾಂಬಳೆ, ಕಾಂಗ್ರೆಸ್ ಮುಖಂಡರಾದ ರವೀಂದ್ರ ಕಾಂಬಳೆ, ಎಸ್.ಡಿ.ಎಮ್.ಸಿ ಸದಸ್ಯರಾದ ಶಿವಶಂಕರಪ್ಪ ಅಡಿಹುಡಿ, ಮಾಂತೇಶ ಬಸರಗಿ, ರಮೇಶ್ ಬೆಳ್ಳಿಕಟ್ಟಿ , ಮುಂತಾದವರು ಉಪಸ್ಥಿತರಿದ್ದರು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಪ್ರತಾಪ್.ವಾಯ್.ಕಿಳ್ಳಿ.ಇಲಕಲ್ಲ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button