ವಿಜಯಪುರ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಲೋಕಾ ದಾಳಿ.
ವಿಜಯಪುರ ಜೂನ್.28

ವಿಜಯಪುರ ಜಿಲ್ಲೆಯಲ್ಲೂ ಬುಧವಾರ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಜಿಲ್ಲೆಯಲ್ಲಿ ಇಬ್ಬರ ಅಧಿಕಾರಿಗಳ ಮೇಲೆ ನಾಲ್ಕು ಕಡೆಗಳಲ್ಲಿ ದಾಳಿ ಮಾಡಿ ಪರಿಶೀಲನೆ ಮಾಡುತ್ತಿದ್ದಾರೆ.ಪಿಡಬ್ಲೂಡಿ ಇಲಾಖೆ ಜೆಇ ಭೀಮನಗೌಡ. ಬಿರಾದಾರ ಮನೆ ಹಾಗೂ ಸಂಬಂಧಿ ಶ್ರೀಕಾಂತ್. ಅಂಗಡಿ ಮನೆ ಮೇಲೆ ದಾಳಿ ಮಾಡಿದ್ದು, ಪಿಡಬ್ಲೂಡಿ ಇಲಾಖೆ ಬಸವನಬಾಗೇವಾಡಿ ವಿಭಾಗದಲ್ಲಿ ಪ್ರಭಾರಿ ಎಇಇ ಆಗಿ ಭೀಮನಗೌಡ. ಬಿರಾದಾರ ಕಾರ್ಯನಿರ್ವಹಿಸುತ್ತಿದ್ದಾರೆ. ವಿಜಯಪುರ ನಗರದ ಆರ್ ಟಿ ಓ ಕಚೇರಿ ಹಿಂಭಾಗದಲ್ಲಿ ಭೀಮನಗೌಡ ಬಿರಾದಾರ ಮನೆ ಇದೆ. ಅಲ್ಲದೇ, ಮುದ್ದೇಬಿಹಾಳ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಅಸಿಸ್ಟೆಂಟ್ ಎಇಇ ಜೆ.ಪಿ. ಶೆಟ್ಟಿ ಮನೆಯ ಸ್ವಗ್ರಾಮವಾದ ಸಾಸನೂರನಲ್ಲಿರುವ ಮನೆ ಮೇಲೆ ವಿಜಯಪುರ ಲೋಕಾಯುಕ್ತ ಎಸ್ಪಿ ಅನಿತಾ. ಹದ್ದನ್ನವರ ನೇತೃತ್ವದಲ್ಲಿ ದಾಳಿ ನಡೆಸಿ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ. ನಾಲ್ಕು ಕಡೆಗಳಲ್ಲಿ 1 ಡಿವೈಎಸ್ಪಿ,7 ಇನ್ಸಪೆಕ್ಟರ್ ನೇತೃತ್ವದಲ್ಲಿ ದಾಳಿಗೈದಿದ್ದಾರೆ.
ಜಿಲ್ಲಾ ವರದಿಗಾರರು:ರಾಜಶೇಖರ್.ಸಿಂಧೆ.ಶಿರಗೂರ