ಶ್ರೀ ಆಂಜನೇಯ ದೇವಸ್ಥಾನಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 1.5 ಲಕ್ಷ ಮಂಜೂರು.

ಹನುಮನಹಳ್ಳಿ ಜೂನ್.23

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಹನುಮನಹಳ್ಳಿ ಗ್ರಾಮದಲ್ಲಿ ದಿನಾಂಕ 23 ಜೂನ್ 2024 ರಂದು ಭಾನುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೊಟ್ಟೂರು ಯೋಜನಾ ಕಚೇರಿ ವ್ಯಾಪ್ತಿಯ ತೊಟ್ಟಿಲು ಮಠ ವಲಯದ ಹನುಮನಹಳ್ಳಿ ಕಾರ್ಯಕ್ಷೇತ್ರದ ಶ್ರೀ ಆಂಜನೇಯ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಧರ್ಮಸ್ಥಳದ ಧರ್ಮಧಿಕಾರಿಗಳು 1.50000 ರೂಪಾಯಿ ಮೊತ್ತವನ್ನು ಮಂಜೂರು ಮಾಡಿದ್ದು. ಈ ದಿನ ವಿಜಯನಗರ ಜಿಲ್ಲೆಯ ಗೌರವಾನ್ವಿತ ಜಿಲ್ಲಾ ನಿರ್ದೇಶಕರಾದ ಸತೀಶ್ ಶೆಟ್ಟಿ ರವರು ದೇವಸ್ಥಾನದ ಮುಂದಿನ ಎಲ್ಲಾ ಕೆಲಸ ಕಾರ್ಯಗಳು ಸುಲಲಿತವಾಗಿ ಸಾಗಲಿ ಮಂಜುನಾಥ ಸ್ವಾಮಿಯ ಪ್ರಸಾದ ನಿಮ್ಮ ಗ್ರಾಮದ ದೇವಸ್ಥಾನಕ್ಕೆ ದೊರಕಿದೆ ಎಂಬುವ ಮಾತನ್ನು ಸಮಿತಿ ಸದಸ್ಯರಿಗೂ ಹಾಗೂ ಊರಿನ ಗ್ರಾಮಸ್ಥರಿಗೂ ತಿಳಿಸುವ ಮೂಲಕ ಡಿ ಡಿ ಯನ್ನು ಸಮಿತಿಯ ಅಧ್ಯಕ್ಷರು ಹಾಗೂ ಎಲ್ಲಾ ಸದಸ್ಯರ ಉಪಸ್ಥಿತಿಯಲ್ಲಿ ವಿತರಣೆ ಮಾಡಿದರು.

ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಡಿ ಭರಮನಗೌಡ್ರು, ತಾಲ್ಲೂಕಿನ ಯೋಜನಾಧಿಕಾರಿ ನವೀನ್ ಕುಮಾರ್, ದೇವಸ್ಥಾನ ಸಮಿತಿ ಅಧ್ಯಕ್ಷರಾದ ಪ್ರಭಾಕರ್, ಬಿ ಬಸವರಾಜ್, ನಿವೃತ್ತ ಶಿಕ್ಷಕರಾದ ಸಿದ್ದಪ್ಪ,ಹಾಗೂ ಊರಿನ ಮುಖಂಡರು ಮತ್ತು ಸಮಿತಿಯ ಉಪಾಧ್ಯಕ್ಷರು ಹಾಗು ಸರ್ವ ಸದಸ್ಯರು, ವಲಯದ ಮೇಲ್ವಿಚಾರಕರಾದ ಜಗದೀಶ್, ಸೇವಾ ಪ್ರತಿನಿಧಿ ರಂಜಿತಾ ಉಪಸ್ಥಿತರಿದ್ದು ಕಾರ್ಯಕ್ರಮ ಯಶಸ್ವಿ ಗೊಳಿಸಲಾಯಿತು. ಈ ಸಂದರ್ಭದಲ್ಲಿ ಹೆಚ್ ಜಿ ರಾಮನಗೌಡ ಚನ್ನಬಸಪ್ಪ ಜಯಪ್ಪ ಸ್ವಾಮಿ ಎಂ ಸುನಿಲ್ ಅಧ್ಯಕ್ಷರು ಕೃಷಿ ಪತ್ತಿನ ಸಹಕಾರ ಸಂಘ ಟಿ ರವಿಗೌಡ ಬೆನಕನಹಳ್ಳಿ ಬಸನಗೌಡ್ರು ಶರಣಪ್ಪ ಮತ್ತಿತರರು ಮುಖಂಡರು ಹಾಗೂ ಮಹಿಳೆಯರು ಹಾಗೂ ಯುವಕರು ಸೇರಿದ್ದರು.

ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಪ್ರದೀಪ್ ಕುಮಾರ್ ಸಿ.ಕೊಟ್ಟೂರು.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button