ಹೂಡೇಂ ಗ್ರಾಂ. ಪಂಚಾಯಿತಿಯಲ್ಲಿ ನಾಡ ಪ್ರಭು ಕೆಂಪೇಗೌಡ ಜಯಂತಿ ಆಚರಣೆ.

ಹೂಡೇಂ ಜೂನ್.27

ಕಾನಾ ಹೊಸಹಳ್ಳಿ ಸಮೀಪದ ಹೂಡೇಂ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಾಡಪ್ರಭು ಕೆಂಪೇಗೌಡ ಅವರ 515 ನೇ. ಜಯಂತಿಯನ್ನು ಆಚರಿಸಲಾಯಿತು. ಈ ವೇಳೆ ಕೆಂಪೇಗೌಡ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಭಿವೃದ್ಧಿ ಅಧಿಕಾರಿ ಚಂದ್ರಪ್ಪ ಮಾತನಾಡಿ ನಾಡಪ್ರಭು ಕೆಂಪೇಗೌಡ ಅವರು 16 ನೇ. ಶತಮಾನದಲ್ಲಿಯೇ ಬೆಂಗಳೂರು ಪಟ್ಟಣದ ನಿರ್ಮಾಣಕ್ಕೆ ಅಡಿಗಲ್ಲನ್ನು ಹಾಕಿದ್ದರು. ಅಂದಿನ ಕಾಲದಲ್ಲಿ ದೂರದೃಷ್ಟಿ ಹೊಂದಿದ್ದ ಕೆಂಪೇಗೌಡರು ರಾಜ್ಯದ ರಾಜಧಾನಿ ಬೆಂಗಳೂರು ನಗರವನ್ನು ಅಚ್ಚುಕಟ್ಟಾಗಿ ನಿರ್ಮಾಣ ಮಾಡಿದ ಮಹಾನ್ ಹೋರಾಟಗಾರ ಬೆಂಗಳೂರಿನ ಸುತ್ತ ಮುತ್ತ ಯಾವುದೇ ನದಿಯ ಆಸರೆ ಇಲ್ಲ ವಾಗಿರುವುದರಿಂದ ಅನೇಕ ಕೆರೆಕಟ್ಟೆ, ನಿರ್ಮಿಸಿ ಕೃಷಿ ಮತ್ತು ಅಭಿವೃದ್ಧಿಗೆ ದಾರಿ ದೀಪವಾಗಿದ್ದಾರೆ. ಅವರನ್ನು ಕೇವಲ ಒಂದು ಜಾತಿ ಧರ್ಮಕ್ಕೆ ಸೀಮಿತ ಗೊಳಿಸದೆ ಎಲ್ಲರೂ ಗೌರವಿಸಬೇಕು ಎಂದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ತಿಪ್ಪೇರುದ್ರಪ್ಪ, ಗ್ರಾ‌ಮ ಪಂಚಾಯತಿ ಸದಸ್ಯರಾದ ಕುಮಾರ್ ರೆಡ್ಡಿ, ಸುಂದರಮ್ಮ ಮಲ್ಲಿಕಾರ್ಜುನ್, ಬಿಲ್ ಕಲೆಕ್ಟರ್ ಮಂಜಣ್ಣ, ಗ್ರಂಥಾಲಯ ಮೇಲ್ವಿಚಾರಕ ಟಿ ಗುರುರಾಜ್, ಸಿಬ್ಬಂದಿ ದಕ್ಷಿಣ ಮೂರ್ತಿ, ಕಂಪ್ಯೂಟರ್ ಆಪರೇಟರ್ ತಿಪ್ಪೇಸ್ವಾಮಿ, ಕಾಯಕ ಮಿತ್ರ ಗಂಗಮ್ಮ, ವಿ.ಆರ್.ಡಬ್ಲ್ಯೂ ಸಲ್ಮಾ ಸೇರಿದಂತೆ ಗ್ರಾಮ ಪಂಚಾಯತಿ ಸಿಬ್ಬಂದಿಗಳು, ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.

ಹೋಬಳಿ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಕೆ.ಎಸ್.ವೀರೇಶ್ ಕಾನಾ ಹೊಸಹಳ್ಳಿ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Your email address will not be published. Required fields are marked *

Back to top button