ಮಾದಕ ವಸ್ತು ಸೇವನೆ ಮತ್ತು ಮಾರಾಟ ಕಾನೂನು ಬಾಹಿರ ಕಂಡು ಬಂದರೆ ನಿರ್ದಾಕ್ಷಿಣ್ಯ ಕ್ರಮ – ಪಿ.ಎಸ್.ಐ ಗೀತಾಂಜಲಿ ಶಿಂಧೆ.
ಕೊಟ್ಟೂರು ಜೂನ್.28
![](https://i0.wp.com/sknewskannada.in/wp-content/uploads/2024/06/IMG-20240628-WA00561.jpg?resize=708%2C326&ssl=1)
ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಕೊಟ್ಟೂರು ಪಟ್ಟಣದಲ್ಲಿ ಮಾದಕ ವಸ್ತುಗಳ ಸೇವನೆಗೆ ಒಳಗಾದರೆ ಅದರಿಂದ ಹೊರ ಬರುವುದು ತುಂಬಾನೇ ಕಷ್ಟಕರವಾಗಿದೆ ಇದನ್ನು ಸೇವಿಸುವುದು ಮತ್ತು ಮಾರಾಟ ಮಾಡುವುದು ದೊಡ್ಡ ಅಪರಾಧವಾಗಿದೆ ಒಂದು ವೇಳೆ ಮಾರಾಟ ಮಾಡುವುದು ಕಂಡು ಬಂದಿದ್ದೆ ಆದರೆ ಅಂತವರ ವಿರುದ್ಧ ಪೋಲಿಸ್ ಇಲಾಖೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಪಿಎಸ್ಐ ಗೀತಾಂಜಲಿ ಶಿಂಧೆ ರವರು ತಿಳಿಸಿದರು.ಪಟ್ಟಣದ ಇಂದು ಕಾಲೇಜ್ ಮತ್ತು ಕೊಟ್ಟೂರೇಶ್ವರ ಮಹಾವಿದ್ಯಾಲಯ ಕಾಲೇಜ್ ನಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳ ಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ಕುರಿತು ಮಾತನಾಡಿದರು.
![](https://i0.wp.com/sknewskannada.in/wp-content/uploads/2024/06/IMG-20240628-WA0055.jpg?resize=708%2C708&ssl=1)
ನಗರ ಪ್ರದೇಶದಲ್ಲಿರುವ ಶಾಲಾ ಕಾಲೇಜುಗಳ ಬಳಿಯೇ ಮಾದಕ ವಸ್ತುಗಳಾದ ಗಾಂಜಾ ಆಫೀಮು ಅಂತಹ ಅಪಾಯಕಾರಿ ವಸ್ತುಗಳು ಮಾರಾಟ ಮಾಡಲಾಗುತ್ತಿದ್ದು ಇದರಿಂದ ಅಪ್ರಾಪ್ತ ವಯಸ್ಸಿನವರು ದಾರಿ ತಪ್ಪಿ ಡ್ರಗ್ಸ್ ಮತ್ತಿನಲ್ಲಿ ಅಪರಾಧ ಕೃತ್ಯಗಳನ್ನು ಎಸಗಿ ನಮ್ಮ ಜೀವನವನ್ನು ಹಾಳು ಮಾಡಿಕೊಂಡು ಸಮಾಜದಲ್ಲಿ ಕಂಟಕವಾಗಿ ಪರಿಗಣಿಸಿದ್ದಾರೆ. ಆದ್ದರಿಂದಾಗಿ ಈಗಿನ ಯುವಕರು ಎಚ್ಚರವ ಹಿಸಿಕೊಂಡು ಮಾದಕ ವಸ್ತುಗಳಿಗೆ ದಾಸರಾಗದೆ ತಮ್ಮ ಜೀವನವನ್ನು ರೂಪಿಸಿ ಕೊಳ್ಳಬೇಕು ಯಾವರಾದರೂ ಇಂತಹ ಅಪಾಯಕಾರಿ ವಸ್ತುಗಳನ್ನು ಮಾರಾಟ ಮಾಡುವುದು ಸೇವನೆ ಮಾಡುವುದು ಕಂಡು ಬಂದರೆ ಸೂಕ್ಷ್ಮವಾಗಿ ಮಾಹಿತಿ ಕೊಡಿ ಅಂತವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಂಡು ಸೂಕ್ತ ಶಿಕ್ಷೆಗೆ ಗುರಿ ಪಡಿಸಲಾಗುವುದು ಹಾಗೂ ಮಾಹಿತಿ ಕೊಟ್ಟವರ ಹೆಸರನ್ನು ಗುಪ್ತವಾಗಿ ಇರಿಸಲಾಗುವುದು ಎಂದು ಹೇಳಿದರು.
ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಪ್ರದೀಪ್. ಕುಮಾರ್ ಸಿ ಕೊಟ್ಟೂರು.