ಮೊಳಕಾಲ್ಮುರು ತಾಲೂಕಿನ ರಾಂಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ ಸಾರ್ವಜನಿಕ ಜನತಾ ದರ್ಶನ ಕಾರ್ಯಕ್ರಮದಲ್ಲಿ – ಅಧಿಕಾರಿಗಳು ಮತ್ತು ಶಾಸಕರು ಪಾಲ್ಗೊಂಡರು.

ರಾಂಪುರ ಜು.01

ಮೊಳಕಾಲ್ಮೂರು ತಾಲ್ಲೂಕು ಆಡಳಿತದ ಹಾಗೂ ಎಲ್ಲಾ ಇಲಾಖೆಗಳ ಸಹಯೋಗ ದೊಂದಿಗೆ ಇಂದು ಜನಪ್ರಿಯ ಶಾಸಕರಾದ ಸನ್ಮಾನ ಶ್ರೀ ಎನ್ ವೈ ಗೋಪಾಲಕೃಷ್ಣ ರವರು ರಾಂಪುರ ಗ್ರಾಮ ಪಂಚಾಯತಿ ಆವರಣದಲ್ಲಿ ತಾಲೂಕು ಮಟ್ಟದ “ಜನತಾ ದರ್ಶನ” ಕಾರ್ಯಕ್ರಮದಲ್ಲಿ ಸಾರ್ವಜನಿಕರ ಹವಾಲುಗಳನ್ನು ಸ್ವೀಕರಿಸಿದರು.ಕೃಷಿ, ತೋಟಗಾರಿಕೆ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳ ವತಿಯಿಂದ ಆಯೋಜಿಸಲಾಗಿದ್ದ ವಸ್ತು ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ.ವಿವಿಧ ಇಲಾಖೆ ವತಿಯಿಂದ ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಿಸಲಾಯಿತು.

ಸಾರ್ವಜನಿಕರು ಸಮಸ್ಯೆಗಳ ಬಗ್ಗೆ ನನ್ನ ಗಮನಕ್ಕೆ ತಂದಿದ್ದಾರೆ. ಅವುಗಳಲ್ಲಿ ಕಾನೂನು ರೀತಿಯ ನ್ಯಾಯ ಸಮ್ಮತವಾಗಿದ್ದರೆ ಅಂತಹ ಕೆಲಸಗಳನ್ನು ಅಧಿಕಾರಿಗಳಿಗೆ ಇಂತಿಷ್ಟು ಟೈಮ್ ಒಳಗೆ ಅರ್ಜಿ ಕೊಟ್ಟಂತ ಫಲಾನುಭವಿಗೆ ಕೆಲಸ ಮಾಡಿಕೊಡಿ ಎಂದು ಅಧಿಕಾರಿಗಳಿಗೆ ಖಡಕ್ ಸಂದೇಶ ಕೊಟ್ಟ ಶಾಸಕರು ನಮ್ಮ ಸರ್ಕಾರ ಜನ ಸಾಮಾನ್ಯರಿ ಗೋಸ್ಕರ ಬಡವರಿಗೆ ಗೋಸ್ಕರ ಸ್ಪಂದಿಸಲಿದೆ ಎಂದು ಭರವಸೆ ನೀಡಿದರು.ಸಾರ್ವಜನಿಕರು ಸಲ್ಲಿಸಿರುವ ತಮ್ಮ ಅರ್ಜಿಗಳನ್ನು ಆದ್ಯತೆಯ ಮೇರೆಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಶೀಘ್ರವೇ ವಿಲೇವಾರಿ ಸೂಕ್ತ ಪರಿಹಾರ ಕಲ್ಪಿಸಲು ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಸಿಇಓ ಶ್ರೀ ಸೋಮಶೇಖರ್, ಉಪ ವಿಭಾಗಅಧಿಕಾರಿ ಕಾರ್ತಿಕ್, ತಹಶೀಲ್ದಾರ್ ಜಗದೀಶ್, ತಾಲೂಕು ಪಂಚಾಯತ್ ಇ.ಓ ಪ್ರಕಾಶ್, ಡಿ ವೈ ಎಸ್ ಪಿ ರಾಜಣ್ಣ, ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು, ರಾಂಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಟಿ ನಾಗವೇಣಿ, ಉಪಾಧ್ಯಕ್ಷರು ಸದಸ್ಯರು ,ಆಶಾ ಹಾಗೂ ಅಂಗನವಾಡಿ, ಕಾರ್ಯಕರ್ತರು,ಚುನಾಯಿತ ಜನ ಪ್ರತಿನಿಧಿಗಳು,ವಿವಿಧ ಗ್ರಾಮಗಳಿಂದ ಆಗಮಿಸಿದ ಗ್ರಾಮಸ್ಥರು, ಮೊದಲಾದವರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.

ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ತಿಪ್ಪೇಸ್ವಾಮಿ.ಹೊಂಬಾಳೆ ಮೊಳಕಾಲ್ಮುರು.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Your email address will not be published. Required fields are marked *

Back to top button