“ನಮ್ಮ ನಡೆ ಆರೋಗ್ಯದ ಕಡೆ” ಆರೋಗ್ಯ ಅರಿವು ಜಾಗೃತಿ.
ಬೆನಕಟ್ಟಿ ಜು.02
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಾಗಲಕೋಟೆ, ಪ್ರಾಥಮಿಕ ಆರೋಗ್ಯ ಕೇಂದ್ರ ಶಿರೂರ ಸಹಯೋಗದಲ್ಲಿ ಉಪಕೇಂದ್ರ ಬೆನಕಟ್ಟಿ ವ್ಯಾಪ್ತಿಯ ಹೊನ್ನಾಕಟ್ಟಿ ಗ್ರಾಮದ ತೋಟದ ಪ್ರಗತಿ ಇಂಗ್ಲೀಷ್ ಮಾಧ್ಯಮ ಪೂರ್ವ ಪ್ರಾಥಮಿಕ ಶಾಲೆಯಲ್ಲಿ “ನಮ್ಮ ನಡೆ ಆರೋಗ್ಯದ ಕಡೆ” ಸಾಂಕ್ರಾಮಿಕ ರೋಗಗಳ ತಡೆಗೆ ಜಾಗೃತಿ ಆಯೋಜಿಸಲಾಗಿತ್ತು. ಶಾಲಾ ಮುಖ್ಯ ಶಿಕ್ಷಕಿ, ಪಿ ಪಿ ನಾಯಕ, ಆರೋಗ್ಯ ನಿರೀಕ್ಷಣಾಧಿಕಾರಿ, ಎಸ್ ಎಸ್ ಅಂಗಡಿ “ಆರೋಗ್ಯ ಸಿಂಚನ” ಕೈಪಿಡಿ ಬಿಡುಗಡೆ ಮಾಡುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಾಸ್ತಾವಿಕವಾಗಿ ಆರೋಗ್ಯ ನಿರೀಕ್ಷಣಾಧಿಕಾರಿ, ಎಸ್ ಎಸ್ ಅಂಗಡಿಯವರು “ನಮ್ಮ ನಡೆ ಆರೋಗ್ಯದ ಕಡೆ” “ಕಡಿತ ಚಿಕ್ಕದು ಹಾನಿ ದೊಡ್ಡದು” “ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆ ನಮ್ಮ ಗುರಿ” ಘೋಷ ವಾಕ್ಯಗಳೊಂದಿಗೆ, ರೋಗ ಬರದಂತೆ ಮುಂಜಾಗ್ರತೆ ಕ್ರಮಗಳ ಪಾಲನೆ ಮಾಡುವುದರಿಂದ ಆಸ್ಪತ್ರೆಗೆ ಅಲೆದಾಟ ತಪ್ಪಿಸಬಹುದು, ಸೊಳ್ಳೆಗಳು ಕಚ್ಚುವಿಕೆಯಿಂದ ಮಲೇರಿಯಾ, ಆನೆಕಾಲು, ಡೆಂಗ್ಯೂ, ಚಿಕೂನ್ ಗುನ್ಯಾ, ಮೆದುಳು ಜ್ವರ ಸಾಂಕ್ರಾಮಿಕವಾಗಿ ಒಬ್ಬರಿಂದ ಒಬ್ಬರಿಗೆ ಹರಡುತ್ತವೆ, ಸೊಳ್ಳೆ ಉತ್ಪತ್ತಿ ತಾಣಗಳು ನಿರ್ಮೂಲನೆಗೆ ಪ್ರತಿಯೊಬ್ಬರು ಕೈ ಜೋಡಿಸಿದಾಗ ಆರೋಗ್ಯವಂತ ಸಮಾಜ ಕಟ್ಟಲು ಸಾಧ್ಯ. ಸೊಳ್ಳೆ ಪರದೆ ನಿರೋಧಕ ಬಳಸಬೇಕು. ನೀರಿನ ಸಂಗ್ರಹಗಳ ಮೇಲೆ ತಪ್ಪದೇ ಮುಚ್ಚಳಿಕೆ ಹಾಕಬೇಕು, ಮನೆ ಸುತ್ತ ಮುತ್ತ ಪರಿಸರ ಸ್ವಚ್ಛತೆ, ವೈಯಕ್ತಿಕ ಸ್ವಚ್ಛತೆ ಕಾಪಾಡಿ ಕೊಳ್ಳಬೇಕು. ಆರೋಗ್ಯ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ತಮ್ಮ ಮನೆಗೆ ಬಂದಾಗ ಸರಿಯಾದ ಮಾಹಿತಿ ನೀಡಿ ಸಹಕರಿಸ ಬೇಕು ಯಾವುದೇ ತರಹ ಜ್ವರ ನಿಶ್ಯಕ್ತಿ ಮೈಮೇಲೆ ಗಂಧೆ ದದ್ದು ಕಾಣಿಸಿದರೆ ನಿರ್ಲಕ್ಷ್ಯ ಬೇಡ ಹತ್ತಿರ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿರಿ ಪರೀಕ್ಷೆ ಚಿಕಿತ್ಸೆ ಉಚಿತವಾಗಿರುತ್ತದೆ. ಆರೋಗ್ಯ ಇಲಾಖೆ ಜೊತೆ ಸಾರ್ವಜನಿಕರು ಸಹಕಾರ ಅಗತ್ಯ ಎಲ್ಲರೂ ಕೂಡಿ ಡೆಂಗ್ಯೂ ಚಿಕೂನ್ ಗುನ್ಯಾ ತಡೆಗೆ “ಈಡೀಜ್ ಇಜಿಪ್ತೆ” ಲಾರ್ವಾ ಉತ್ಪತ್ತಿ ತಾಣಗಳ ನಿರ್ಮೂಲನೆ ಮಾಡೋಣ. “ಆರೋಗ್ಯವಂತ ಕುಟುಂಬ ಆರೋಗ್ಯವಂತ ಸಮಾಜ” ಕಟ್ಟೋಣ ಎಂದು ಮಾಹಿತಿ ನೀಡಿದರು. “ನಮ್ಮ ನಡೆ ಆರೋಗ್ಯದ ಕಡೆ” ಆರೋಗ್ಯ ಸಿಂಚನ ಆರೋಗ್ಯ ಅರಿವು ಜಾಗೃತಿ ಕಾರ್ಯಕ್ರಮದಲ್ಲಿ, ಶಾಲಾ ಶಿಕ್ಷಕಿಯರಾದ, ಆರ್ ಎಚ್ ವಾಲೀಕಾರ,ದೀಪಾ ದೊಡಮನಿ,ಗೀತಾ ಮಲ್ಲಾಡದ ಶಾಲಾ ಮುದ್ದು ಮಕ್ಕಳು ಉತ್ಸಾಹದಿಂದ ಭಾಗವಹಿಸಿದ್ದರು.