7.ನೇ ವೇತನ ಆಯೋಗ ಶೀಘ್ರ ಜಾರಿಗೆ ಒತ್ತಾಯಿಸಿ ಮನವಿ.

ಕೊಟ್ಟೂರು ಜು.08

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯದ ಎಲ್ಲಾ 31 ಕಂದಾಯ ಜಿಲ್ಲೆ, 03 ಶೈಕ್ಷಣಿಕ ಜಿಲ್ಲೆ ಹಾಗು 183 ತಾಲೂಕುಗಳಲ್ಲಿ ಸಂಘದ ಶಾಖೆಗಳನ್ನು ಹೊಂದಿದ್ದು, ಸಮಸ್ತ 6.00 ಲಕ್ಷ ರಾಜ್ಯ ಸರ್ಕಾರಿ ನೌಕರರನ್ನು ಪ್ರತಿ ನಿಧಿಸುವ ಏಕೈಕ ಬೃಹತ್ ಸಂಘಟನೆ ಯಾಗಿದ್ದು, ಪ್ರಕೃತಿ ವಿಕೋಪ, ಉತ್ತರ ಕರ್ನಾಟಕದ ಪ್ರವಾಹ, ಕೋವಿಡ್ ಸಂಕಷ್ಟದಲ್ಲಿ ಸರ್ಕಾರಕ್ಕೆ ಆರ್ಥಿಕ ಸಹಕಾರ ನೀಡಿ ಸೇವಾ ಕಾರ್ಯ ನಿರ್ವಹಿಸುವ ಮೂಲಕ ದೇಶದಲ್ಲಿಯೇ ಮಾದರಿ ಸಂಘಟನೆ ಯಾಗಿದೆ. ಸರ್ಕಾರದ ಯೋಜನೆಗಳನ್ನು ಶ್ರೀಸಾಮಾನ್ಯರಿಗೆ ತಲುಪಿಸುವಲ್ಲಿ ಸರ್ಕಾರಿ ನೌಕರರ ಪಾತ್ರ ಪ್ರಮುಖವಾಗಿದೆ. ಇಂತಹ ಕಾರ್ಯಾಂಗದ ನೌಕರರ ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ನೌಕರರ ಸಂಘದ ಕಾರ್ಯದರ್ಶಿ ಸಿದ್ದಪ್ಪನವರು ಮನವಿ ಮಾಡಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕ ಘಟಕದ ಅಧ್ಯಕ್ಷರಾದ ಜಗದೀಶ ಇವರು 1) ರಾಜ್ಯ 7. ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಿ ಆದೇಶ ಹೊರಡಿಸ ಬೇಕು.2) ಎನ್.ಪಿ.ಎಸ್. ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಮರು ಜಾರಿ ಗೊಳಿಸುವುದು.3) ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ (ಕೆಎಎಸ್ಎಸ್) ಅನುಷ್ಠಾನ ಗೊಳಿಸುವುದು. ಈ 3 ಪ್ರಮುಖ ಬೇಡಿಕೆಗಳನ್ನು ಕೂಡಲೇ ಈಡೇರಿಸ ಬೇಕೆಂದು ಸರ್ಕಾರವನ್ನು ಒತ್ತಾಯಿಸಿ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಿಗೆ ಹಾಗೂ ತಹಶೀಲ್ದಾರರಾದ ಅಮರೇಶ ಜಿ ಕೆ ಇವರಿಗೆ ಮನವಿಯನ್ನು ಸಲ್ಲಿಸಿದರು.ಈ ಸಮಯದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು, ಖಜಾಂಚಿ ಬಸವರಾಜ, ಉಪಾಧ್ಯಕ್ಷರಾದ ಎಸ್.ಎಂ.ಗುರು ಬಸವರಾಜ, ಬಸವರಾಜ ಎಸ್ಎಸ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ- ಡಿ ಸಿದ್ದಪ್ಪ, ಕಾರ್ಯದರ್ಶಿ ಬಾಲಚಂದ್ರ ಜಿ, ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷರಾದ ಜ್ಯೋತಿಬಾಯಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ- ನಾಗೇಶ್, ಸಂಘಟನಾ ಕಾರ್ಯದರ್ಶಿ- ರೇವಣಸಿದ್ದಪ್ಪ, ಮುತ್ತೇಶ್, ಸದಸ್ಯರಾದ ವಿನಯಕುಮಾರ್, ಎಂ ಶಿವಕುಮಾರ, ಕೆ.ಪುಷ್ಪಲತಾ , ತಾಲೂಕ ಕಛೇರಿಯ ಸಿಬ್ಬಂದಿಯವರು ಭಾಗವಹಿಸಿದ್ದರು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಪ್ರದೀಪ್ ಕುಮಾರ್ ಸಿ ಕೊಟ್ಟೂರು.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button