ಡೆಂಗ್ಯೂ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮ.
ಗುಬ್ಬೆವಾಡಿ ಜು.11

ಇಂಡಿ ತಾಲೂಕಿನ ಗುಬ್ಬೆವಾಡ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಅಧ್ಯಕ್ಷರು ಮುಂಜಾಗ್ರತಾ ಕ್ರಮವಾಗಿ ಪಂಚಾಯಿತಿಯ ವ್ಯಾಪ್ತಿಯಲ್ಲಿ ಒಳ ಪಡುವ ಶಿರಗೂರ ಇನಾಂ ಗ್ರಾಮದಲ್ಲಿ ಊರಿನ ಪ್ರಮುಖ ಬೀದಿಗಳಲ್ಲಿ ಹಾಗೂ ಸಾರ್ವಜನಿಕರು ಓಡಾಡುವ ಸ್ಥಳದಲ್ಲಿ ಸೋಳ್ಳೆಗಳು ಹೆಚ್ಚಾಗಿರುವುದನ್ನು ಕಂಡು ದಲಿತ ರಕ್ಷಣಾ ವೇದಿಕೆ ವಿದ್ಯಾರ್ಥಿ ಘಟಕದ ಅಧ್ಯಕ್ಷ ರಾಜಶೇಖರ ಶಿಂಧೆ ಇವರು ಮನವಿ ಮಾಡಿದರು. ಊರಲ್ಲಿ ಅಲ್ಲಲ್ಲಿ ರಸ್ತೆ ಮೇಲೆ ನೀರು ನಿಂತು ಸೋಳ್ಳೆಗಳ ಕಾಟ ಹೆಚ್ಚಾಗಿದೆ. ಮಲೇರಿಯಾ ಡೆಂಗ್ಯೂ ಕಾಲರಾ ರೋಗಗಳು ಬರುವ ಸಾಧ್ಯತೆ ಇದ್ದು ಊರನ್ನು ಶುಚಿಯಾಗಿಸಲು ಮತ್ತು ರಾಸಾಯನಿಕ ಕ್ರಿಮಿನಾಶಕ ಔಷಧಿಗಳನ್ನು ಸಿಂಪಡಿಸಲು ಮನವಿ ಮಾಡಿ ಕೊಂಡಿದ್ದರು. ಅವರ ಮನವಿಗೆ ಸ್ಪಂದಿಸಿದ ಪಂಚಾಯಿತಿ ಆಡಳಿತ ಮಂಡಳಿ ಊರಲ್ಲಿ ಕ್ರಿಮಿನಾಶಕ ಔಷಧಿ ಸಿಂಪರಣೆ ಮಾಡಿ ಸೊಳ್ಳೆಗಳ ನಿಯಂತ್ರಣ ಕಾರ್ಯ ಮಾಡಿದೆ. ಪಂಚಾಯಿತಿ ಆಡಳಿತ ಮಂಡಳಿಗೆ ರಾಜಶೇಖರ ಶಿಂಧೆ ಅಭಿನಂದನೆ ಸಲ್ಲಿಸಿದ್ದಾರೆ.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಶಿವಪ್ಪ ಬಿ.ಹರಿಜನ.ಇಂಡಿ. ವಿಜಯಪುರ.