ನೂತನ ದುರ್ಗಮ್ಮ ದೇವಿ ದೇವಸ್ಥಾನ ಉದ್ಘಾಟನೆ ಮತ್ತು ಪ್ರತಿಷ್ಠಾಪನೆ.
ಕಾನಾ ಹೊಸಹಳ್ಳಿ ಅಕ್ಟೋಬರ್.21

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿಯ ಹೊಸಹಳ್ಳಿ ಗ್ರಾಮದಲ್ಲಿ ಶ್ರೀ ದುರ್ಗಮ್ಮ ನೂತನ ದೇವಸ್ಥಾನ ಉದ್ಘಾಟನೆ ಹಾಗೂ ದೇವಿಯ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿದ್ದ ಷ.ಬ್ರ. ಪ್ರಶಾಂತ ಸಾಗರ ಶಿವಾಚಾರ್ಯ ಮಹಾ ಸ್ವಾಮೀಜಿಗಳು ಸಾನಿಧ್ಯ ವಹಿಸಿದ್ದರು.

ನಂತರ ಮಾತನಾಡಿ ಪೋಷಕರು ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿ ಮತ್ತು ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಕಲಿಸಬೇಕೆಂದು ಹೇಳಿದರು. ಕಾನಾಮಡಗು ದಾಸೋಹ ಮಠದ ಧರ್ಮಾಧಿಕಾರಿ ದಾ.ಮ. ಐಮಡಿ ಶರಣಾರ್ಯರು ಮಾತನಾಡಿ. ಧರ್ಮ ಸಭೆಗೂ ಮುನ್ನ ವೇದಮೂರ್ತಿ ಎ ಎಂ ಚನ್ನವೀರಸ್ವಾಮಿ. ಎಚ್ಎಂಬಿ ಗುರುಮೂರ್ತಿ ಸ್ವಾಮಿ. ಎಚ್ಎಮ್ ಬಸವರಾಜಯ್ಯ ಇವರುಗಳ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನಗಳನ್ನು ಹೋಮ ಹವನಗಳನ್ನು ಹಾಗೂ ಪೂರ್ಣಾಹುತಿ ಮಹಾ ಮಂಗಳಾರತಿ ಮತ್ತು ಪ್ರಸಾದ ವಿನಿಯೋಗ ಕಾರ್ಯ ಕ್ರಮಗಳು ಜರುಗಿದವು.

ಇದೇ ಸಂದರ್ಭದಲ್ಲಿ ಕಾನಾ ಹೊಸಹಳ್ಳಿ ಗ್ರಾಮದ ದೈವಸ್ಥರು ಮುಖಂಡರು. ಸುತ್ತ ಮುತ್ತಲಿನ ಗ್ರಾಮದ ಗ್ರಾಮಸ್ಥರು ಇನ್ನಿತರರು ಉಪಸ್ಥಿತರಿದ್ದರು.
ಹೋಬಳಿ ವರದಿಗಾರರು:ಕೆ.ಎಸ್.ವೀರೇಶ್. ಕಾನಾ ಹೊಸಹಳ್ಳಿ