ಎನ್.ಎಸ್.ಎಸ್ ಒಂದು ವ್ಯಕ್ತಿತ್ವ ವಿಕಸನದ ಘಟಕವಾಗಿದೆ ಎಂದು ವಿದ್ಯಾರ್ಥಿಗಳ ಉದ್ದೇಶಿಸಿ – ಶ್ರೀ ಆಂಜನೇಯನ ನಾಸಲಾಪುರ ಹೇಳಿದರು.
ನಾಸಲಾಪುರ ಮೇ.11

ಶ್ರೀ ಆದಿಕವಿ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ರಾಯಚೂರು ಶ್ರೀ ವೆಂಕಟೇಶ್ವರ ಶಿಕ್ಷಣ ಸಂಸ್ಥೆ (ರಿ) ಮಾನ್ವಿ ಶ್ರೀ ವೆಂಕಟೇಶ್ವರ ಪದವಿ ಮಹಾವಿದ್ಯಾಲಯ ಮಾನ್ವಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ವಿಶೇಷ ವಾರ್ಷಿಕ ಶಿಬಿರವನ್ನು ಮಾನ್ವಿ ತಾಲೂಕಿನ ನಾಸಲಾಪುರ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸೇವೆ ಯೋಜನೆಯ ಶಿಬಿರಾರ್ಥಿಗಳು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶಿಬಿರಾರ್ಥಿ ಗಳಿಂದ ಶ್ರಮದಾನ ಮಾಡಿಸಲಾಯಿತು. ಹಾಗೂ ರಾಷ್ಟ್ರೀಯ ಸೇವೆ ಯೋಜನೆ ವಾರ್ಷಿಕ ಶಿಬಿರವನ್ನು ಶ್ರೀ ವೆಂಕಟೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಮಾಂತೇಶ್ ಓಲೆಕಾರ್, ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಶ್ರೀ ಶಂಕ್ರಪ್ಪ ಅಂಗಡಿ ನಕ್ಕುಂದಿ, ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಂಯೋಜನೆ ಅಧಿಕಾರಿಗಳಾದ ಶ್ರೀ ಮಹಾದೇವ ಬೊಮ್ಮನಾಳ, ಕಾರ್ಯಕ್ರಮ ಉದ್ಘಾಟಕರಾಗಿ ಶ್ರೀ ವೆಂಕಟೇಶ್ವರ ಪದವಿ ಮಹಾವಿದ್ಯಾಲಯದ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಆಂಜನೇಯನ ನಾಸಲಾಪುರ ಉದ್ಘಾಟನೆ ಮಾಡಿ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು “ಎನ್.ಎಸ್.ಎಸ್ ಒಂದು ವ್ಯಕ್ತಿತ್ವ ವಿಕಸನದ ಘಟಕವಾಗಿದೆ” ಎಂದು ಅವರು ಹೇಳಿದರು, ಈ ಸಂದರ್ಭದಲ್ಲಿ ಶ್ರೀ ವೆಂಕಟೇಶ್ವರ ಪದವಿ ಮಹಾವಿದ್ಯಾಲಯ ರಾಜ್ಯಶಾಸ್ತ್ರ ಉಪನ್ಯಾಸಕರಾದ ಹನುಮೇಶ ದೊಡ್ಡಮನಿ, ಇತಿಹಾಸ ಉಪನ್ಯಾಸಕರಾದ ಮಂಜುನಾಥ, ಶಿಬಿರಾರ್ಥಿಗಳನ್ನು ಕುರಿತು ಮಾತನಾಡಿದರು. ಹಾಗೂ ವೆಂಕಟೇಶ್ವರ ಪದವಿ ಮಾಡಿದ್ದಾರೆ ಉಪನ್ಯಾಸಕರಾದ ಶ್ರೀಮತಿ ಶೈಲಜಾ, ಕು. ಬಸಮ್ಮ, ಆಫ್ರಿನ ಬೇಗಮ್, ಸಂತೋಷ ಕುಮಾರ, ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಾರ್ಥಿಗಳು ಉಪಸ್ಥಿತಿ ಇದ್ದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ