ಕೊಂಡ್ಲಹಳ್ಳಿ, ತಳಕು, ಹಾಗೂ ನಾಯಕನಹಟ್ಟಿ ಗ್ರಾಮಗಳಲ್ಲಿ ಹೊಸ ಸಂತೆ ಮಾರ್ಕೆಟ್ ಗೆ – ಚಾಲನೆ ನೀಡಿದ ಶಾಸಕರು.
ತಳಕು ಜು.30

ಇಂದು ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಎನ್ ವೈ ಗೋಪಾಲಕೃಷ್ಣ ರವರು ಕೊಂಡ್ಲಹಳ್ಳಿ ಹಾಗೂ ತಳಕು ಗ್ರಾಮಗಳಲ್ಲಿ ನೂತನ “ಹಳ್ಳಿ ಸಂತೆ” ಮಾರುಕಟ್ಟೆ ಹಾಗೂ ನಾಯಕನಹಟ್ಟಿ ಪಟ್ಟಣದಲ್ಲಿ ನೂತನ ಬಸ್ ನಿಲ್ದಾಣ ಕಾಮಗಾರಿಗಳಿಗೆ ಉದ್ಘಾಟನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಕೊಂಡಳ್ಳಿ ಮಂಜಣ್ಣ ಹಾಗೂ ಮೊಳಕಾಲ್ಮೂರು ಗುತ್ತಿಗೆದಾರ ಅಧ್ಯಕ್ಷರಾದ ಖಾದರ್ ಪಿಡಬ್ಲ್ಯೂ ಇಲಾಖೆ ಅಧಿಕಾರಿಗಳು ತಾಲೂಕಾ ಪಂಚಾಯಿತಿ ಅಧಿಕಾರಿಗಳು ಹಾಗೂ ಸ್ಥಳೀಯ ಗ್ರಾಮ ಪಂಚಾಯತಿ ಅಧ್ಯಕ್ಷರು, ಚುನಾಯಿತ ಜನ ಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಮೊದಲಾದವರು ಉಪಸ್ಥಿತರಿದ್ದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ತಿಪ್ಪೇಸ್ವಾಮಿ ಹೊಂಬಾಳೆ ಮೊಳಕಾಲ್ಮುರು.