ಅಭಿವೃದ್ಧಿಯಿಂದ ವಂಚಿತವಾದ ಹದಿನೈದು ಗೊಲ್ಲರ ಹಟ್ಟಿಗಳನ್ನು ಒಟ್ಟೊಟ್ಟಿಗೆ ಅಭಿವೃದ್ಧಿ ಪಡಿಸಲಾಗುವುದು – ಶಾಸಕ ಡಾ, ಶ್ರೀ ನಿವಾಸ್.ಎನ್.ಟಿ
ದೊಡ್ಡ ಗೊಲ್ಲರಹಟ್ಟಿ ಜು.31

ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ದೊಡ್ಡ ಗೊಲ್ಲರಹಟ್ಟಿ ಗ್ರಾಮದಲ್ಲಿ 2023-24 ನೇ ಸಾಲಿನ ಕೆ.ಕೆ.ಆರ್.ಡಿ.ಬಿ. ಯೋಜನೆ ಅಡಿಯಲ್ಲಿ ಸಿ.ಸಿ. ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕಾಗಿ ಭೂಮಿ ಪೂಜೆಯನ್ನು ದಿ. 31-07-24 ರಂದು ಮಾನ್ಯ ಶಾಸಕರಾದ ಡಾ. ಶ್ರೀನಿವಾಸ್.ಎನ್.ಟಿ. ಅವರು ನೆರವೇರಿಸಿದ ಬಳಿಕ ಮಾತನಾಡಿದರು. ನಮ್ಮ ಕೂಡ್ಲಿಗಿ ಕ್ಷೇತ್ರದಲ್ಲಿ ಪ್ರತಿ ಹಳ್ಳಿ – ಹಟ್ಟಿಗಳಿಗೆ ಅಭಿವೃದ್ಧಿ ಮಾಡುವ ಯೋಗ ಒಟ್ಟಿಗೆ ಬಂದಿದೆ ಎಂದು ಹೇಳಿದರು. ದೊಡ್ಡ ಗೊಲ್ಲರಹಟ್ಟಿಯ ಕುಂದು ಕೊರತೆಗಳನ್ನು ಆಲಿಸಲು ಶಾಸಕರು ತಮ್ಮ ಜೊತೆಯಲ್ಲಿ ಅಧಿಕಾರಿಗಳು, ಸ್ಥಳೀಯ ಮುಖಂಡರು, ಕಾಡು ಗೊಲ್ಲ ಸಮುದಾಯದ ಹಿರಿಯರು, ಮಹಿಳೆಯರು, ಯುವಕರೊಂದಿಗೆ ಇಡೀ ಊರು ಸುತ್ತಿ ಅಭಿವೃದ್ಧಿಯಿಂದ ವಂಚಿತವಾಗಿರುವುದನ್ನು ಪರಿಶೀಲಿಸಿದರು. ಊರಿನ ರಸ್ತೆಯ ಮಧ್ಯೆ ಮಳೆ ನೀರಿನಿಂದಾಗಿ ಸೊಳ್ಳೆಗಳ ಕಾಟ ಹೆಚ್ಚಿರುವುದರಿಂದ ಅದನ್ನು ತಪ್ಪಿಸಲು ತತ್ ಕ್ಷಣ ನಿಂತ ಸ್ಥಳದಲ್ಲಿಯೇ ಅಧಿಕಾರಿಗಳು ಮತ್ತು ಮುಖಂಡರೊಂದಿಗೆ ಶಾಸಕರು ಚರ್ಚಿಸಿ ಹೊಸ ರಸ್ತೆಯನ್ನು ಕಲ್ಪಿಸಿ ಕೊಡಲು ರಸ್ತೆಯ ಭೂಮಿ ಪೂಜೆ ನೆರವೇರಿಸಿ ಮುಂದಿನ ದಿನಗಳಲ್ಲಿ ಅಭಿವೃದ್ಧಿಯಿಂದ ಹಿಂದುಳಿದಿರುವ ಹದಿನೈದು ಗೊಲ್ಲರ ಹಟ್ಟಿಗಳನ್ನು ಒಟ್ಟೊಟ್ಟಿಗೆ ಅಭಿವೃದ್ಧಿ ಪಡಿಸಲಾಗುವುದು ಎಂದು ಹೇಳಿದರು.
ಹೋಬಳಿ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಕೆ.ಎಸ್.ವೀರೇಶ್. ಕೆ. ಹೊಸಹಳ್ಳಿ.