ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕುಮಾರಿ ದಾವಲಬಿ.ರಾಜೇಸಾಬ.ಡಂಗಿ ಇವರಿಗೆ – ರಾಜ್ಯ ಮಟ್ಟದ ಪ್ರಶಸ್ತಿ.
ಕಣಬೂರ ಅ.03

ವಿಜಯಪುರ ಜಿಲ್ಲೆಯ ಕೊನೆಯ ಗ್ರಾಮವಾದ ಕಣಬೂರ ಗ್ರಾಮದ ಪ್ರತಿಭಾವಂತ ಉಪನ್ಯಾಸಕಿ ಯೊಬ್ಬರು ರಾಜ್ಯ ಮಟ್ಟದ ಅತ್ಯುತ್ತಮ ಉಪನ್ಯಾಸಕಿ ಪ್ರಶಸ್ತಿಗೆ ಭಾಜನ ರಾಗುವುದರ ಮೂಲಕ ಬಬಲೇಶ್ವರ ತಾಲೂಕಿನ ಕೀರ್ತಿಗೆ ಪಾತ್ರರಾಗಿರುತ್ತಾರೆ. ಅಲ್ಪಸಂಖ್ಯಾತರ ಇಲಾಖೆಯ ವತಿಯಿಂದ ಕೊಡ ಮಾಡುವ ರಾಜ್ಯ ಮಟ್ಟದ ಅತ್ಯುತ್ತಮ ಉಪನ್ಯಾಸಕಿ ಪ್ರಶಸ್ತಿಯನ್ನು ಸ್ವೀಕರಿಸಿದ್ದು ಹೆಮ್ಮೆಯ ವಿಷಯವಾಗಿದೆ. ಕುಮಾರಿ ದಾವಲಬಿ.ರಾಜೇಸಾಬ.ಡಂಗಿ ಇವರು ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಣಬೂರ ಗ್ರಾಮದವರು, ಅಲ್ಪಸಂಖ್ಯಾತರ ವತಿಯಿಂದ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಪದವಿ ಪೂರ್ವ ಕಾಲೇಜು ಅರಕೇರಿಯಲ್ಲಿ ಇತಿಹಾಸ ಶಾಸ್ತ್ರದಲ್ಲಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2023-24 ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾವು ಬೋಧಿಸಿದ ಇತಿಹಾಸ ವಿಷಯದಲ್ಲಿ ವಿದ್ಯಾರ್ಥಿಗಳು ಉತ್ತಮ ಗುಣಾತ್ಮಕ ಶೇ.100 ಫಲಿತಾಂಶ ಪಡೆದಿರುತ್ತಾರೆ. ಈ ಸಾಧನೆಯನ್ನು ಗುರುತಿಸಿ ಅತ್ಯುತ್ತಮ ಉಪನ್ಯಾಸಕಿ ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ ಅಭಿನಂದಿಸಿದೆ. ದಿನಾಂಕ 29 7 2024 ರಂದು ಸೋಮವಾರ ದಂದು ಬೆಂಗಳೂರಿನಲ್ಲಿ ಏರ್ಪಡಿಸಿದ ರಾಜ್ಯಮಟ್ಟದ ಅತ್ಯುತ್ತಮ ಉಪನ್ಯಾಸಕಿ ಪ್ರಶಸ್ತಿ ಹಾಗೂ ಅಭಿನಂದನಾ ಪ್ರಮಾಣ ಪತ್ರವನ್ನು ವಸತಿ ಹಾಗೂ ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ.ಝೆಡ್ ಜಮೀರ್ ಅಹ್ಮದ್ ಖಾನ್ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರು ಈ ಪ್ರಶಸ್ತಿ ನೀಡಿ ಸನ್ಮಾನಿಸಿ ಅಭಿನಂದಿಸಿದರು. ಪ್ರಾಥಮಿಕ ಶಿಕ್ಷಣ ಸ್ವ ಗ್ರಾಮದ ಕಣಬೂರನಲ್ಲಿ ಮುಗಿಸಿ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಶಿಕ್ಷಣ ಎನ್ ಜಿ ಎಚ್ ಎಸ್ ಗಲಗಲಿ, ಬಿ ಎಡ್ ಪದವಿ ಶಂಕರೇಗೌಡ ಬಿಎಡ್ ಕಾಲೇಜು ಮಂಡ್ಯ, ಸ್ನಾತ್ತಕೋತರ ಪದವಿ ಮುಕ್ತ ವಿಶ್ವವಿದ್ಯಾಲಯ ಮೈಸೂರಿನಲ್ಲಿ ಪೂರ್ಣಗೊಳಿಸಿ 2021 ರಲ್ಲಿ ಅಲ್ಪಸಂಖ್ಯಾತರ ಇಲಾಖೆಯ ಉಪನ್ಯಾಸಕಿಯಾಗಿ ಆಯ್ಕೆ ಗೊಂಡಿದ್ದರು. ಒಟ್ಟು 7 ಸರ್ಕಾರಿ ಉದ್ಯೋಗಕ್ಕೆ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಆಯ್ಕೆ ಯಾದವರು ಇವರು. ಸುಮಾರು 10 ವರ್ಷಗಳ ಕಾಲ ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕಳಾಗಿ ಸೇವೆ ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳಿಗೆ ಒಳ್ಳೆಯ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವ ಉಪನ್ಯಾಸಕಿ ಕುಮಾರಿ ದಾವಲಬಿ ರಾಜೇಸಾಬ ಡಂಗಿ ಇವರ ಕರ್ತವ್ಯ ನಿಷ್ಠೆಗೆ ಒಲಿದ ಗೌರವ ತಂದಿದ್ದು ವಿಜಯಪುರ ಜಿಲ್ಲೆಯ ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾಧಿಕಾರಿ ಪ್ರಶಾಂತ್ ಪೂಜಾರಿ ಹರ್ಷ ವ್ಯಕ್ತಪಡಿಸಿದರು.ಅದೇ ರೀತಿಯಾಗಿ ಕಣಬೂರ ಗ್ರಾಮದ ಗುರು ಹಿರಿಯರು ಹರ್ಷವನ್ನು ವ್ಯಕ್ತಪಡಿಸಿದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಪ್ರತಾಪ್ ವಾಯ್ ಕಿಳ್ಳಿ ಇಲಕಲ್ಲ.