ಸಾಂಸ್ಕೃತಿಕ ಮತ್ತು ಶಾರೀರಿಕ ಚಟುವಟಿಕೆಗಳ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮೆಟ್ಟಿಲಾಗುತ್ತವೆ – ಸಿದ್ದರಾಮ ಶ್ರೀ ಗಳು.
ಕಲಕೇರಿ ಆ.07

ದುರ್ಗುಣಗಳು ವ್ಯಕ್ತಿತ್ವವನ್ನು ಕ್ಷೀಣಿಸುತ್ತವೆ ಶಿಸ್ತು, ಸಂಯಮ ಹಾಗೂ ಕಲಿಕಾಸಕ್ತಿ, ಕ್ರೀಡೆ ಇನ್ನಿತರ ಚಟುವಟಿಕೆಗಳಲ್ಲಿ ಪ್ರತಿಯೋಬ್ಬರು ಸಕ್ರೀಯವಾಗಿ ಭಾಗಿ ಯಾಗುವುದರಿಂದ ವಿದ್ಯಾರ್ಥಿಗಳ ಬದುಕು ಸುಂದರ ಮತ್ತು ಸದೃಡ ಗೊಳ್ಳುತ್ತದೆ ಎಂದು ಕಲಕೇರಿ ಗುರು ಮರುಳಾರಾಧ್ಯರ ಹಿರೇಮಠದ ಸಿದ್ದರಾಮ ಶಿವಾಚಾರ್ಯರು ಹೇಳಿದರು.ಕಲಕೇರಿ ಪಟ್ಟಣದ ಮಲ್ಲಿಕಾರ್ಜುನ ವಿಧ್ಯಾವರ್ಧಕ ಸಂಘದ ಅಡಿಯಲ್ಲಿ ನಡೆಯುತ್ತಿರುವ ಅನುದಾನಿತ ಶ್ರೀ ಬಸವೇಶ್ವರ ಪದವಿ ಪೂರ್ವ ಮಹಾ ವಿಧ್ಯಾಲಯದ ಆವರಣದಲ್ಲಿ ಮಂಗಳವಾರ ಬೆಳಿಗ್ಗೆ 10 ಘಂಟೆಗೆ ನಡೆದ 2024-25 ನೇ ಸಾಲಿನ ಸಾಂಸ್ಕೃತಿಕ ಮತ್ತು ಶಾರೀರಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರಥಮ ಪಿಯುಸಿ ವಿಧ್ಯಾರ್ಥಿಗಳ ಸ್ವಾಗತ ಸಮಾರಂಭದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳಿಗೆ ತಮ್ಮ ಪಾಲಕರ ಪೋಷಕರ ಅರಿವು ಇಟ್ಟು ಕೊಳ್ಳಬೇಕು. ಮನೆಯಲ್ಲಿ ಅನೇಕ ಕಷ್ಟ ಕಾರ್ಪಣ್ಯಗಳ ಮಧ್ಯೆಯೂ ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆ ಯಾಗದಂತೆ ಅವರು ನೋಡಿ ಕೊಳ್ಳುತ್ತಾರೆ ಆದರೇ ಇಂದೂ ಅದೇಷ್ಟೋ ವಿದ್ಯಾರ್ಥಿಗಳು ಮೋಬೈಲ್ ಚಾಳಿಗೆ ಬಿದ್ದು ತಮ್ಮ ಉಜ್ವಲ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಇದು ವಿಷಾದನೀಯ ಇದೆಲ್ಲವನ್ನು ಬದಿಗೊತ್ತಿ ವಿದ್ಯಾ ಗುರುಗಳು ಮತ್ತು ಪಾಲಕರ ಮಾರ್ಗದರ್ಶನದಲ್ಲಿ ಮುನ್ನಡೆದು ಉತ್ತಮ ಪ್ರಜೆಗಳಾಗಿ ಹೊರ ಹೊಮ್ಮುವಂತೆ ವಿದ್ಯಾರ್ಥಿಗಳಿಗೆ ಕಿವಿ ಮಾತನ್ನು ಹೇಳಿದರು.ಸಿಂದಗಿಯ ಎಚ್ ಜಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎ.ಆರ್ ಹೆಗ್ಗಣದೊಡ್ಡಿ, ಕಲಕೇರಿ ಪಿಎಸ್ಐ ಸುರೇಶ ಮಂಟೂರ ವಿಶೇಷ ಉಪನ್ಯಾಸ ನೀಡಿದರು. ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ್ ಜೋಗುರ, ಸಂಸ್ಥೆಯ ಅಧ್ಯಕ್ಷ ಶಾಂತಗೌಡ ಪಾಟೀಲ ಮಾತನಾಡಿದರು. ಸಂಸ್ಥೆಯ ಹಿರಿಯ ನಿರ್ದೇಶಕ ಷಣ್ಮುಕಪ್ಪ ಝಳಕಿ, ಮಲಕಾಜಪ್ಪಗೌಡ ಬಿರಾದಾರ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಪ್ರಾಚಾರ್ಯ ಎಸ್ ಹಿರೇಮಠ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಇಲಾಖೆಯಲ್ಲಿ ಸೇವೆಯನ್ನು ಸಲ್ಲಿಸಿ ನಿವೃತ್ತರಾದ ಟಿಇಎಂ ಪ್ರೌಢ ಶಾಲೆಯ ಮುಖ್ಯಗುರು ಬಿ ಡಿ ಭಾಣಕಾರ ಮತ್ತು ದ್ವಿತಿಯ ದರ್ಜೆ ಸಹಾಯಕ ನಬಿಲಾಲ್ ಬಡೆಮಗೋಳ ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ವಿಧ್ಯಾರ್ಥಿಗಳು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಪುಷ್ಪಗಳನ್ನು ನೀಡಿ ಕಾಲೇಜಿಗೆ ಸ್ವಾಗತಿಸಿದರು. ಈ ವೇಳೆ ಕಾಲೇಜಿನ ವಿಧ್ಯಾರ್ಥಿಗಳಿಂದ ಸಾಂಸ್ಕೃತಿಕ, ಮನೊರಂಜನಾ ಕಾರ್ಯಕ್ರಮಗಳು ಜರುಗಿದವು. ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರಾದ ಸಿದ್ದಣ್ಣ ಚಳ್ಳಗಿ, ವೀರಪ್ಪ ಝಳಕಿ, ಅಪ್ಪಾಸಾಬ ಗುಮಶೇಟ್ಟಿ,ಎಸ್ ಬಿ ಪಾಟೀಲ, ದೇವಿಂದ್ರ ಹುಲೆಂಕಿ, ಸಾಂತವೀರ ಧುರ್ಗಿ, ಎಸ್ ಎಸ್ ಕಲಶೇಟ್ಟಿ, ಬಿ ಜಿ ಚನಗೊಂಡ, ಜಿ ಜಿ ಮಡೆದಾರ, ರವಿಕುಮಾರ ಗುಮಶೆಟ್ಟಿ, ಬಸವರಾಜ್ ಕುಂಬಾರ, ವಿರೇಶ ಝಳಕಿ, ಶಿವಕುಮಾರ ಚಿಕ್ಕಮಠ, ಭೋರಮ್ಮ ಗೋಟಗುಣಕಿ, ಸ್ವಪ್ನ ಸಜ್ಜನ್ ಮಡಿವಾಳಪ್ಪ ಹಯ್ಯಾಳ, ಕಾವೇರಿ ಪತ್ತಾರ ಸೇರಿದಂತೆ ಇತರರು ಇದ್ದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಮೈಬೂಬಬಾಷ ಮನಗೂಳಿ ತಾಳಿಕೋಟೆ.