ಉತ್ತಮ ಆರೋಗ್ಯಕ್ಕಾಗಿ ಮುಂಜಾಗ್ರತೆಯ ಅರಿವು ಮುಖ್ಯ – ಎಸ್.ಎಸ್ ಅಂಗಡಿ. ಆರೋಗ್ಯ ನಿರೀಕ್ಷಣಾಧಿಕಾರಿ.
ಹೊನ್ನಾಕಟ್ಟಿ ಆ.14

ಹೊನ್ನಾಕಟ್ಟಿಯ ತೋಟದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ, ಉತ್ತಮ ಆರೋಗ್ಯಕ್ಕಾಗಿ ಮುಂಜಾಗ್ರತೆಯ ಅರಿವು ಜಾಗೃತಿ ಆಯೋಜಿಸಲಾಗಿತ್ತು ಪ್ರಾಸ್ತಾವಿಕವಾಗಿ ಆರೋಗ್ಯ ನಿರೀಕ್ಷಣಾಧಿಕಾರಿ ಎಸ್.ಎಸ್ ಅಂಗಡಿಯವರು, ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂಗ್ಯೂ, ಚಿಕೂನ್ ಗುನ್ಯಾ, ಆನೆಕಾಲು ರೋಗ, ಮೆದುಳು ಜ್ವರ ಸೊಳ್ಳೆ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಸಾಂಕ್ರಾಮಿಕವಾಗಿ ಹರಡುವುವು. ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆ ಮಾಡಲು ಮುಂಜಾಗ್ರತೆಯ ಗ್ರಾಮಗಳಾದ ಲಾರ್ವಾ ಉತ್ಪತ್ತಿ ತಾಣಗಳು ಬೆಳೆಯದಂತೆ ನೋಡಿ ಕೊಳ್ಳಬೇಕು ಸೊಳ್ಳೆ ಪರದೆ ನಿರೋಧಕ ಬಳಸಬೇಕು,

ಸುತ್ತ ಮುತ್ತ ಪರಿಸರ ಸ್ವಚ್ಛತೆ ಕಾಪಾಡಿ ಕೊಳ್ಳಬೇಕು ವೈಯಕ್ತಿಕ ಸ್ವಚ್ಛತೆ ಆದ್ಯತೆ ನೀಡಬೇಕು ಎಂದು ತೋಟದ ಮನೆಗಳಲ್ಲಿ ವಾಸವಿರುವ ಮುಖಂಡರಿಗೆ ಯುವಕರಿಗೆ ಮುಂಜಾಗ್ರತೆ ಕ್ರಮಗಳ ಬಗ್ಗೆ ಆರೋಗ್ಯ ಅರಿವು ಮುಖ್ಯ ಎಂದರು. ಶಾಲಾ ಮುಖ್ಯ ಶಿಕ್ಷಕಿ ಎಲ್.ಐ.ಲಮಾಣಿ, ಎಸ್.ಡಿ.ಎಮ್.ಸಿ ಅಧ್ಯಕ್ಷ ಸುಭಾಷ್ ರಾಜಪ್ಪ ನರಗುಂದ, ಗುರುಮಾತೆ ಎ.ಎಸ್ ಭೂತನಾಳ, ಮುದ್ದು ಮಕ್ಕಳು ಉತ್ಸಾಹದಿಂದ ಭಾಗವಹಿಸಿದ್ದರು.