ಮೊಳಕಾಲ್ಮುರು ಪಟ್ಟಣದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಸ್ಟ್ಯಾಂಡ್ ಸುಸಜ್ಜಿತವಾಗಿ ನಿರ್ಮಾಣ ಮಾಡಲು ಅಧಿಕಾರಿಗಳಿಗೆ ಸೂಚನೆ ಕೊಟ್ಟ ಶಾಸಕರು.
ಮೊಳಕಾಲ್ಮುರು ನವೆಂಬರ್.2

ಮೊಳಕಾಲ್ಮೂರು ಪಟ್ಟಣದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಕಾಮಗಾರಿಯನ್ನು ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಎನ್ ವೈ ಗೋಪಾಲಕೃಷ್ಣರವರು ವೀಕ್ಷಿಸಿಮಾತನಾಡಿದರು ಆದಷ್ಟು ಬೇಗನೆ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕ ಉಪಯೋಗಕ್ಕೆ ಅನುಕೂಲ ಹಾಗೂ ಗುಣಮಟ್ಟದ ಕಾಮಗಾರಿ ಮಾಡಬೇಕೆಂದು ಗುತ್ತಿಗೆದಾರರಿಗೆ ತಿಳಿಸಿದರು.

ಮತ್ತು ಮೊಳಕಾಲ್ಮೂರು ಪಟ್ಟಣದ ಹೆಚ್.ಆರ್. ರಸ್ತೆ ಸುಮಾರು ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರಸ್ತೆಯನ್ನು ಅತಿ ವೇಗವಾಗಿ ಕೇವಲ ಎರಡೇ ತಿಂಗಳಲ್ಲಿ ರಸ್ತೆ ಕಾಮಗಾರಿಯನ್ನು ಮುಗಿಸಿ ಮತ್ತು ಈ ರಸ್ತೆಗೆ ಡಿವೈಡರ್ ಹಾಕಿ ವಿದ್ಯುತ್ ಕಂಬಗಳನ್ನು ರೂಪಿಸಿದಂತ ಶಾಸಕರು ಈಗ ಮೊಳಕಾಲ್ಮೂರು ಪಟ್ಟಣ ಎಂಬುದು ಎಲ್ಲರಿಗೂ ಗೊತ್ತಾಗುತ್ತದೆ ಎಂದು ಎಲ್ಲಾ ಸಾರ್ವಜನಿಕರು ಹೇಳುತ್ತಾರೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಚುನಾಯಿತ ಜನ ಪ್ರತಿನಿಧಿಗಳು ಮೊದಲಾದವರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು:ತಿಪ್ಪೇಸ್ವಾಮಿ.ಹೊಂಬಾಳೆ. ಮೊಳಕಾಲ್ಮುರು