ಸಡಗರ ಸಂಭ್ರಮ ದಿಂದ 78 ನೇ. ಸ್ವಾತಂತ್ರ್ಯೋತ್ಸವ ಧ್ವಜಾರೋಹಣ.

ಖಾನಾ ಹೊಸಹಳ್ಳಿ ಆ.15

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಖಾನಾ ಹೊಸಹಳ್ಳಿ ಹೋಬಳಿಯ ಖಾನಾ ಹೊಸಹಳ್ಳಿ ಗ್ರಾಮದ ಕನ್ನಡ ಭವನದ ಆವರಣದಲ್ಲಿ ಸ್ವಾತಂತ್ರ್ಯೋತ್ಸವದ ಕನ್ನಡ ಸಾಹಿತ್ಯ ಪರಿಷತ್ತಿನ ಹೋಬಳಿ ಘಟಕದ ಅಧ್ಯಕ್ಷರಾದ ಎನ್ ಎಸ್ ತಿಪ್ಪೇಸ್ವಾಮಿ ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿ ಅನೇಕ ಹುತಾತ್ಮರ ತ್ಯಾಗ ಬಲಿದಾನದ ಪ್ರತೀಕ ನಮಗೆ ಸ್ವಾತಂತ್ರ್ಯ ದೊರೆತಿದೆ. ಪ್ರತಿಯೊಬ್ಬ ಭಾರತೀಯರು ಸ್ವತಂತ್ರ ಹೋರಾಟದಲ್ಲಿ ಮಡಿದ ದೇಶದ ಮಹನೀಯರ ಸ್ಮರಣೆ ಮನಃ ಪೂರ್ವಕವಾಗಿ ಮಾಡಬೇಕು. ಆ ಹಿರಿಯ ಚೇತನ ಶಕ್ತಿಗಳು ಚೆಲ್ಲಿದ ರಕ್ತ ಪ್ರಾಣದಿಂದ ಇಂದು ನಾವುಗಳು ದೇಶದಲ್ಲಿ ನೆಮ್ಮದಿಯಿಂದ ಉಸಿರಾಡುತ್ತಿದ್ದೇವೆ. ನಮ್ಮ ದೇಶ ಬಹು ಗ್ರಾಮಗಳನ್ನು ಹೊಂದಿರುವ ಬಲಿಷ್ಠ ದೇಶಾಭಿಮಾನದ ಒಗ್ಗಟ್ಟು ಎಲ್ಲಾ ಜನಸ್ತೋಮ ಅಭಿಮಾನದಿಂದ ಎಂದು ತಿಳಿಸಿದರು. ವಿವಿಧತೆಯಲ್ಲಿ ಏಕತೆ ಇದ್ದರೆ ಭಾರತೀಯರು ಮೌಲ್ಯ ಹಾಗೂ ದೇಶದ ಘನತೆ. ಗೌರವ ಹೆಚ್ಚುವುದು. ಇಂದಿನ ಮಕ್ಕಳೇ ಭವಿಷ್ಯತ್ತಿನ ಕಿರಣಗಳು ಅವರಲ್ಲಿ ಒಳ್ಳೆಯ ಸಂಸ್ಕಾರ ಸಂಪ್ರದಾಯ ಸಂಸ್ಕೃತಿ ಭವ್ಯ ಭಾರತ ದೇಶದ ಪರಿಕಲ್ಪನೆ ಮೂಡಿಸುವುದು ಇಂದಿನ ವಿದ್ಯಾರ್ಥಿಗಳಿಗೆ ಅಗತ್ಯ ಎಂದರು. ಇದೇ ಸಂದರ್ಭದಲ್ಲಿ ಹೊಸಹಳ್ಳಿ ಕನ್ನಡ ಭವನದ ಸ್ಥಳ ದಾನಿಗಳಾದ ಎಚ್ ಕೆ ವೆಂಕಟೇಶ್ವರ ರಾವ್. ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಸಹ ಕಾರ್ಯದರ್ಶಿ. ಕೆ ಸುಭಾಷ್ ಚಂದ್ರ. ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಕಾರ್ಯದರ್ಶಿ ಶಾಮ ಸುಂದರ ಸ ಪಾರೆ. ಹೋಬಳಿ ಘಟಕದ ಕೋಶ ಅಧ್ಯಕ್ಷರಾದ ರಾಮಕೃಷ್ಣ ಸಫಾರೆ. ಶರಣನಗೌಡ. ವೈಭವ ಶಾಲೆಯ ಮುಖ್ಯ ಗುರುಗಳಾದ ಪ್ರಕಾಶ್. ಕರಿ ಬಸಣ್ಣ. ವಿದ್ಯಾರ್ಥಿಗಳು ಸಾರ್ವಜನಿಕ ಉಪಸ್ಥಿತರಿದ್ದರು.

ಹೋಬಳಿ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಕೆ.ಎಸ್.ವೀರೇಶ್.ಕೆ.ಹೊಸಹಳ್ಳಿ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button