ಸರ್ಕಾರಿ ಪದವಿ ಪೂರ್ವ ಕಾಲೇಜ ಆವರಣದಲ್ಲಿ 78 ನೇ. ಸ್ವಾತಂತ್ರ್ಯ ದಿನಾಚರಣೆ ಕ್ಷೇತ್ರದ ಎನ್.ವೈ.ಗೋಪಾಲಕೃಷ್ಣ ಶಾಸಕರು ಧ್ವಜಾರೋಹಣ ನೆರವೇರಿಸಿದರು.
ಮೊಳಕಾಲ್ಮುರು ಆ.15

78 ನೇ. ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಇಂದು ಸರ್ಕಾರಿ ಪದವಿ ಪೂರ್ವ ಕಾಲೇಜ್ ಮೊಳಕಾಲ್ಮೂರು ಮೈದಾನದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಎನ್ ವೈ ಗೋಪಾಲಕೃಷ್ಣರವರು ಪಾಲ್ಗೊಂಡರು, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಿದರು.

ಶಾಲಾ ಮಕ್ಕಳಿಂದ ದೇಶದ ಭಾವೈಕ್ಯತೆ ಸಾರುವ ನೃತ್ಯಗಳು ನೋಡುಗರ ಕಣ್ಮನ ಸೆಳೆದವು.ತಹಶೀಲ್ದಾರ್ ಜಗದೀಶ್, ಹಾಗೂ ತಾಲೂಕಾ ಮಟ್ಟದ ಎಲ್ಲಾ ಇಲಾಖೆ ಅಧಿಕಾರಿಗಳು, ಚುನಾಯಿತ ಜನ ಪ್ರತಿ ನಿಧಿಗಳು,ಮುಖಂಡರು,ಮೊದಲಾದವರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ತಿಪ್ಪೇಸ್ವಾಮಿ.ಹೊಂಬಾಳೆ.ಮೊಳಕಾಲ್ಮುರು