ಅನಂತ ಕುಮಾರ್ ಹೆಗಡೆ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ.
ಕಾನಾ ಹೊಸಹಳ್ಳಿಜನೇವರಿ.16

ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ಧ ಕೀಳು ಮಟ್ಟದ ಹೇಳಿಕೆ ನೀಡಿದ ಸಂಸದ ಅನಂತ ಕುಮಾರ ಹೆಗಡೆ ವಿರುದ್ಧ ಹೊಸಹಳ್ಳಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಾನಾ ಹೊಸಹಳ್ಳಿ ಪಟ್ಟಣದ ನಾಡ ಕಚೇರಿಯ ಉಪ ತಹಶಿಲ್ದಾರರ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಈ ವೇಳೆ ಹೊಸಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ ಕುಮಾರ್ ಗೌಡ್ರು ಮಾತನಾಡಿ, ಚುನಾವಣೆ ಹೊಸ್ತಿಲಿನಲ್ಲಿ ಪ್ರಚಾರಕ್ಕಾಗಿ ಕಾಂಗ್ರೆಸ್ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ನಾಲಿಗೆ ಹರಿಬಿಟ್ಟಿರುವುದು ಖಂಡನೀಯ ಎಂದರು. ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡಿದ್ದ ಸಂಸದರಾದ ಶ್ರೀ ಅನಂತ ಕುಮಾರ್ ಹೆಗಡೆಯವರು ತಮ್ಮ ಭಾಷಣದಲ್ಲಿ ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರಿಗೆ ಮೂರ್ಖ ಸಿದ್ದರಾಮಯ್ಯ ನಂತರ ಹಿಂದೂ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಅವರ ಗತಿಗೆಟ್ಟ ಹಿಂದೂ ವಿರೋಧಿ ಮಾನಸಿಕತೆಗೆ ನಮ್ಮ ವಿರೋಧ ಇದೆ ಅಯೋಧ್ಯೆಯಲ್ಲಿ ಉದ್ಘಾಟನೆ ಗೊಳ್ಳುತ್ತಿರುವ ರಾಮಮಂದಿರದ ಉದ್ಘಾಟನೆಗೆ ನೀನು ಬಂದರೂ ಬಾರದಿದ್ದರೂ” ಉದ್ಘಾಟನೆ ಹಾಗೆ ಆಗುತ್ತದೆ ಮಗನೇ’ ಎಂದು ಕೀಳು ಭಾಷಣ ಮಾತನಾಡಿ ಅವಾಚ್ಯ ಪದ ಬಳಸಿರುವುದು ಅಕ್ಷಮ್ಯ ಅಪರಾಧವಾಗಿದ್ದು ಇದು ನಮಗೆ ಮಾಧ್ಯಮಗಳ ಮೂಲಕ ಪ್ರಸಾರವಾದ ವಿಡಿಯೋ ತುಣುಕುಗಳು ನಮ್ಮ ಗಮನಕ್ಕೆ ಬಂದಿರುತ್ತದೆ.ಕರ್ನಾಟಕ ರಾಜ್ಯದ ಗೌರವಾನ್ವಿತ ಸಂವಿಧಾನಿಕ ಸ್ಥಾನವಾದ ಮುಖ್ಯಮಂತ್ರಿಗಳ ಸ್ಥಾನದಲ್ಲಿರುವ ಸನ್ಮಾನ್ಯ ಸಿದ್ದರಾಮಯ್ಯನವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವುದು ನಮಗೆ ನೋವುಂಟು ಮಾಡಿರುತ್ತದೆ ಮತ್ತು ರಾಜ್ಯದ ಪ್ರಥಮ ಪ್ರಜೆಯಾದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರಿಗೆ ಬೈದಿರುವುದು ಇಡೀ ರಾಜ್ಯದ ಜನತೆಗೆ ನಿಂದಿಸಿದಂತೆಆಗಿರುತ್ತದೆ ಅನಂತ್ ಕುಮಾರ್ ಹೆಗಡೆಯವರು ತಮ್ಮ ನಾಲಿಗೆಯ ಮೇಲೆ ಹಿಡಿತವಿಲ್ಲದೆ ಹರಿಬಿಟ್ಟು ಮಾತನಾಡುವುದು ಅವರ ಸ್ಥಾನಕ್ಕೆ ಶೋಭೆ ತರುವಂತದ್ದಲ್ಲ ಆದ್ದರಿಂದ ಮಾನ್ಯ ಮುಖ್ಯಮಂತ್ರಿಗಳಿಗೆ ಆವಾಚ್ಯ ಪದ ಬಳಕೆ ಮಾಡಿರುವ ಅನಂತ್ಕುಮಾರ್ ಹೆಗಡೆಯವರು ಕ್ಷಮೆಯಾಚಿಸಿ ಇವರ ವಿರುದ್ಧ ದೂರು ದಾಖಲಿಸಿ ಕೊಂಡು ಅವರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಹೊಸಹಳ್ಳಿ ಬ್ಲಾಕ್ ಕಾಂಗ್ರೆಸ್ ಪಕ್ಷದ ವತಿಯಿಂದ ಒತ್ತಾಯಿಸುತ್ತಿದ್ದಾರೆ.ಈ ಸಂದರ್ಭದಲ್ಲಿ ಹೊಸಹಳ್ಳಿ ಬ್ಲಾಕ್ ಕಾಂಗ್ರೆಸ್ ಪಕ್ಷದ ಅದ್ಯಕ್ಷ ಕೆ ಜಿ ಕುಮಾರ್ ಗೌಡ್ರು, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಿ ಎ ಮನೋಜ್ ಕುಮಾರ್, ಮೈನಾರಿಟಿ ಮುಖಂಡ ಗಪರ್, ಹಿಂದುಳಿದ ವರ್ಗಗಳ ರಾಜ್ಯ ಕಾರ್ಯದರ್ಶಿ ಲಕ್ಕಜಿ ಮಲ್ಲಿಕಾರ್ಜುನ, ಗ್ರಾಪಂ ಅಧ್ಯಕ್ಷ ಚೇತನ್, ಕಂಡಕ್ಟರ್ ಬಸವರಾಜ್, ವೆಂಕಟೇಶ್, ಮಹಾಂತೇಶ್, ಪೇಪರ್ ಮಂಜಯ್ಯ, ಜಗದೀಶ್, ಇಜಾಜ್ ಅಹಮದ್, ನಾಗೇಶ್, ಟಿ ಗಂಗಣ್ಣ, ಸಕಲಾಪುರದ ಹಟ್ಟಿ ಹರಿಶ್ ಹಾಗೂ ಹೊಸಹಳ್ಳಿ ಬ್ಲಾಕ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಹಾಜರಾಗಿದ್ದರು.
ಹೋಬಳಿ ವರದಿಗಾರರು:ಕೆ.ಎಸ್.ವೀರೇಶ್.ಕಾನಾ ಹೊಸಹಳ್ಳಿ