“ಆರೋಗ್ಯ ಅರಿವು” ಜನ ಸಂಪರ್ಕ ಸಭೆ.
ಗುಂಡನಪಲ್ಲೆ ಸ.03

ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಾಗಲಕೋಟೆ, ಪ್ರಾಥಮಿಕ ಆರೋಗ್ಯ ಕೇಂದ್ರ ಶಿರೂರ ಸಹಯೋಗದಲ್ಲಿ, ಆರೋಗ್ಯ ಉಪ ಕೇಂದ್ರ ಬೆನಕಟ್ಟಿ ವ್ಯಾಪ್ತಿಯ ಗುಂಡನಪಲ್ಲೆ ಗ್ರಾಮದಲ್ಲಿ “ಆರೋಗ್ಯ ಅರಿವು ಜನ ಸಂಪರ್ಕ ಸಭೆ ಆಯೋಜಿಸಲಾಗಿತ್ತು.ಪ್ರಾಸ್ತಾವಿಕವಾಗಿ ಆರೋಗ್ಯ ನಿರೀಕ್ಷಣಾಧಿಕಾರಿ ಎಸ್.ಎಸ್ ಅಂಗಡಿಯವರು ನಮ್ಮ ಆರೋಗ್ಯ ನಮ್ಮ ಕೈಯಲ್ಲಿ ಮುಂಜಾಗ್ರತೆ ಕ್ರಮಗಳ ಪಾಲಿಸಿ ಆಸ್ಪತ್ರೆಗೆ ಅಲೆದಾಟ ತಪ್ಪಿಸಿ ಕೊಳ್ಳಿ ಎಂಬ ಘೋಷ ವಾಕ್ಯಯೊಂದಿಗೆ,

ಸಾಂಕ್ರಾಮಿಕ ರೋಗಗಳಾದ ಮಲೇರಿಯಾ ಆನೆಕಾಲು, ಮೆದುಳು ಜ್ವರ, ಡೆಂಗ್ಯೂ, ಚಿಕೂನ್ ಗುನ್ಯಾ, ಝಿಕಾ ಸೊಳ್ಳೆ ಕಚ್ಚುವಿಕೆ ಯಿಂದ ಒಬ್ಬರಿಂದ ಒಬ್ಬರಿಗೆ ಸಾಂಕ್ರಾಮಿಕವಾಗಿ ಹರಡುವುವು. ಸೊಳ್ಳೆಗಳ ಉತ್ಪತ್ತಿ ತಾಣಗಳು ಬೆಳೆಯದಂತೆ ನೋಡಿ ಕೊಳ್ಳಬೇಕು ಸೊಳ್ಳೆ ಪರದೆ ನಿರೋಧಕ ಬಳಸ ಬೇಕು ಮನೆ ಸುತ್ತ ಮುತ್ತ ಪರಿಸರ ಸ್ವಚ್ಛತೆ ಕಾಪಾಡಿ ಕೊಳ್ಳಬೇಕು ವಾಂತಿ ಬೇಧಿ ತಡೆಗೆ ಶುದ್ಧ ನೀರು ಸೇವನೆ ವೈಯಕ್ತಿಕ ಸ್ವಚ್ಛತೆ ಆದ್ಯತೆ ನೀಡಬೇಕು. ಯಾವುದೇ ತರಹ ಜ್ವರ ಕಾಣಿಸಿದರೆ ಹತ್ತಿರದ ಸರಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆ ಚಿಕಿತ್ಸೆ ಉಚಿತವಾಗಿರುತ್ತದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು, ತಮ್ಮ ಮನೆಗೆ ಬಂದಾಗ ಸರಿಯಾದ ಮಾಹಿತಿ ನೀಡಿ ಸಾರ್ವಜನಿಕರು ಸಹಕಾರ ನೀಡಬೇಕು. ಆರೋಗ್ಯ ಅರಿವು ಜನ ಸಂಪರ್ಕ ಸಭೆ ಕಾರ್ಯಕ್ರಮದಲ್ಲಿ ಆರೋಗ್ಯ ಅಧಿಕಾರಿಗಳು, ಗ್ರಾಮದ ಶ್ರೀಶೈಲ ಸಂ ಮೇಟಿ, ಹುಚ್ಚಪ್ಪ ಕಾರಜೋಳ,ರಮೇಶ ಕಟ್ಟಿಮನಿ, ಪರಸಪ್ಪ ವಾಲಿಕಾರ, ನಾಗರಾಜ್ ಪಾಟೀಲ್, ರಂಗಪ್ಪ ವಾಲಿಕಾರ, ನಿಂಗಪ್ಪ ಜುಮನಾಳ,ಬಾಲಪ್ಪ ಪೂಜಾರಿ ಗ್ರಾಮದ ಮುಖಂಡರು ಯುವಕರು ಭಾಗವಹಿಸಿದ್ದರು.