ಸಿದ್ದರಾಮಯ್ಯ ತೇಜೋವಧೆ ಸರಿಯಲ್ಲ – ಸಂಜಯ ದೊಡ್ಡಮನಿ.
ಗದಗ ಆ .08

ಶೋಷಿತ ಸಮುದಾಯಗಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಇಲ್ಲ ಸಲ್ಲದ ತೇಜೋವಧೆ ಮಾಡಲು ಬಿಜೆಪಿ- ಜೆಡಿಎಸ್ ರಾಜ್ಯಪಾಲರ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿವೆ ಎಂದು ಗದಗ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಮಾಧ್ಯಮ ವಕ್ತಾರರಾದ ಸಂಜಯ್ ದೊಡ್ಡಮನಿ ಅವರು ಆರೋಪಿಸುತ್ತಿದ್ದಾರೆ. ಜೆಡಿಎಸ್ ಬಿಜೆಪಿ ಮೈತ್ರಿ ಪಕ್ಷಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿವೆ ಈ ಕೂಡಲೇ ಮುಖ್ಯಮಂತ್ರಿಗಳಿಗೆ ನೀಡಿರುವ ನೋಟಿಸ್ ಹಿಂಪಡೆಯ ಬೇಕೆಂದು ಆಗ್ರಹಿಸುತ್ತಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಏಳಿಗೆಯನ್ನು ಸಹಿಸಲಾರದೆ ಮೈತ್ರಿ ಪಕ್ಷಗಳು ಷಡ್ಯಂತರವನ್ನು ರೂಪಿಸಿವೆ ರಾಜಪಾಲರ ಮುಖಾಂತರ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಆಸ್ಥಿರ ಗೊಳಿಸಲು ಪಿತೂರಿ ನಡೆಯುತ್ತಿದೆ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಿ ಬಿಟ್ಟರೆ ಶಾಶ್ವತವಾಗಿ ಹಿಂದುಳಿದ ವರ್ಗದವರನ್ನು ಅಧಿಕಾರದಿಂದ ದೂರ ಇಡಬಹುದು ಎಂಬುದು ಅವರ ಉದ್ದೇಶ ಒಂದು ವೇಳೆ ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ನಿಂತಲ್ಲಿ ಸಿದ್ದರಾಮಯ್ಯ ಪರ ಇಡೀ ಅಹಿಂದ ವರ್ಗ ಬಂಡೆಯಂತೆ ನಿಂತಿದೆ ಕುತಂತ್ರ ನಿಲ್ಲಿಸಲಿದ್ದಲ್ಲಿ ಈಗ ಹೋರಾಟ ನಡೆಸುವುದಾಗಿ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಶಿವಾನಂದ.ಎಫ್.ಗೋಗೇರಿ.ತೋಟಗಂಟಿ.ಗದಗ.