ಶಿಕ್ಷಕರ ದಿನಾಚರಣೆ ನಿಮಿತ್ತವಾಗಿ ಪ್ರವಾಸ ಕಥನ ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಏರ್ಪಡಿಸಿದರು.

ಅಥಣಿ ಸ.06

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಜಾಧಜಿ ಶಿಕ್ಷಣ ಸಂಸ್ಥೆಯ ಜೆ.ಎ.ಪದವಿ ಪೂರ್ವ ಕಾಲೇಜನಲ್ಲಿ ಶಿಕ್ಷಕರ ದಿನಾಚರಣೆ ನಿಮಿತ್ತವಾಗಿ ಪ್ರವಾಸ ಕಥನ ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಆಗಮಿಸಿದ ಶ್ರೀ ಅರವಿಂದರಾವ ದೇಶಪಾಂಡೆಯವರು ಸಸಿಗೆ ನೀರುಣ್ಣಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡುತ್ತಾ ದೇಶ ಸುತ್ತಿ ನೋಡು ಕೋಶ ಓದಿ ನೋಡು ಎನ್ನುವಂತೆ ಮನುಷ್ಯನಿಗೆ ಓದುವ ಹವ್ಯಾಸ ಇರಬೇಕು ವಿವಿಧೆಡೆ ಪ್ರವಾಸ ಮಾಡಿ ಅಲ್ಲಿನ ಸಂಸ್ಕೃತಿ ಸಂಸ್ಕಾರಗಳನ್ನು ಅರಿತು ಕೊಳ್ಳಬೇಕು ಒಳ್ಳೆಯ ದೆನ್ನುವುದನ್ನು ಸ್ವೀಕರಿಸಬೇಕು ಆದರೆ ಜಗತ್ತಿನ ಎಲ್ಲ ಸಂಸ್ಕೃತಿಯಲ್ಲಿ ನಮ್ಮ ಭಾರತೀಯ ಸಂಸ್ಕೃತಿಯೇ ಶ್ರೇಷ್ಠ ಎಂದು ಹೇಳಿದರು.

ಭಾರತೀಯ ವಿದ್ಯಾರ್ಥಿಗಳಲ್ಲಿ ಇರುವ ಜ್ಞಾನ ಮತ್ತು ಕೌಶಲ್ಯ ಶ್ರೇಷ್ಠವಾದ್ದದು ಅದರ ಸದುಪಯೋಗ ಮಾಡಿಕೊಂಡು ಭಾರತ ಸ್ಥಾನ ಇನ್ನೂ ಎತ್ತರಕ್ಕೆ ಬೆಳೆಯ ಬೇಕೆಂದು ಅಭಿಪ್ರಾಯ ಪಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಅನಿಲ್ ವಿ. ದೇಶಪಾಂಡೆ ಅವರು ಕಾಲೇಜು ಅಭಿವೃದ್ಧಿ ಸಮಿತಿ ಯ ಸದಸ್ಯರು ವಹಿಸಿ ಕೊಂಡಿದ್ದರು ವಿಶೇಷ ಉಪಸ್ಥಿತಿ ಸ್ಥಾನದಲ್ಲಿ ಕಾಲೇಜಿನ ಪ್ರಾಚಾರ್ಯರ ಶ್ರೀ ಎಂ.ಪಿ. ಮೇತ್ರಿ ಸರವರು ವಹಿಸಿದ್ದರು. ಕಾಲೇಜಿನ ವಿದ್ಯಾರ್ಥಿಗಳ ಪ್ರಧಾನ ಕಾರ್ಯದರ್ಶಿಯಾದ ಕುಮಾರಿ. ನಿರ್ಮಲಾ ಬೇಡರಟ್ಟಿ. ಹಾಗೂ ಕುಮಾರ್. ಅನಿಕೇತನ ಕಂಬಾರ್ ವಹಿಸಿ ಕೊಂಡಿದ್ದರು ಕಾರ್ಯಕ್ರಮದ ನಿರೂಪಣೆಯನ್ನು ಕುಮಾರಿ ಅಮೃತ ಜಮಖಂಡಿ ಅವರು ನಿರ್ವಹಿಸಿದ್ದರು ಕುಮಾರಿ ಪ್ರೀತಿ ಮಾದರ ಸ್ವಾಗತಿಸಿದರು ಕುಮಾರಿ ಶ್ರದ್ಧಾ ತೋಟಗಿ ಪರಿಚಯಿಸಿದರು ಕುಮಾರಿ ಕಾಂಚನ ಬಡಕಂಬಿ ವಂದಿಸಿದರು. ಕಾರ್ಯಕ್ರಮದಲ್ಲಿ ಎಲ್ಲ ಉಪನ್ಯಾಸಕರು ಉಪನ್ಯಾಸಕಿಯರು ಎಲ್ಲ ವರ್ಗಗಳ ವಿದ್ಯಾರ್ಥಿಗಳು ಹಾಜರಿದ್ದರು.

ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎಂ.ಎಂ.ಶರ್ಮಾ. ಬೆಳಗಾವಿ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button