ರಾಂಪುರದ ಶಾಸಕರ ನಿವಾಸದಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗಾಗಿ ಆಗ್ರಹಿಸಿ – ಶಾಸಕರಿಗೆ ಮನವಿ ಸಲ್ಲಿಸಿದರು.
ರಾಂಪುರ ಡಿ.14

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ರಾಂಪುರ ಗ್ರಾಮದ ಶಾಸಕರ ನಿವಾಸದಲ್ಲಿ ಮೊಳಕಾಲ್ಮುರು ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಎನ್ ವೈ ಗೋಪಾಲಕೃಷ್ಣ ರವರಿಗೆ ಮಾದಿಗ ದಂಡೋರ ಸಮಿತಿಯವರು ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಮನವಿ ಸಲ್ಲಿಸಿದರು. ಸುಮಾರು 30 ವರ್ಷಗಳ ಕಾಲ ನಿರಂತರವಾಗಿ ಹೋರಾಟದ ಪ್ರತಿ ಫಲವಾಗಿ ಸುಪ್ರೀಂ ಕೋರ್ಟ್ ಆದೇಶ ಕೊಟ್ಟರು ರಾಜ್ಯದಲ್ಲಿ ನಮಗೆ ಮೀಸಲಾತಿ ಸಿಗುತ್ತಿಲ್ಲ ಎಂದು ಮಾದಿಗ ದಂಡೋರ ಶಾಸಕರಿಗೆ ಮನವಿ ಸಲ್ಲಿಸಿದರು. ಶೋಷಿತ ವರ್ಗದವರನ್ನು ಕಡೆ ಗಣಿಸಬಾರದು ಗ್ರಾಮಗಳಲ್ಲಿ ನಾವುಗಳೆಲ್ಲಾ ಚುನಾವಣೆಗಳಲ್ಲಿ ಬೇಕಾಗುತ್ತೇವೆ ಆದರೆ ಸರ್ಕಾರ ದಿಂದ ಸೌಲತ್ತು ಪಡೆಯಲು ಆಗದಿರುವುದಕ್ಕೆ ದುರಂತ ಸರಿ ಎಂದು ಮಾತನಾಡಿದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ತಿಪ್ಪೇಸ್ವಾಮಿ. ಹೊಂಬಾಳೆ.ಮೊಳಕಾಲ್ಮುರು