ರಥೋತ್ಸವದ ವೇಳೆ ಅವಘಡ – ರಥದ ಗಾಲಿಗೆ ಸಿಲುಕಿ ವ್ಯಕ್ತಿ ಸಾವು.

ಇಂಗಳಗಿ ಸ.08

ದೇವರ ಹಿಪ್ಪರಗಿ ತಾಲೂಕಿನ ಬಿ.ಬಿ. ಇಂಗಳಗಿ ಗ್ರಾಮದಲ್ಲಿ ಘನ ಗುರುಸಿದ್ದೇಶ್ವರ ಜಾತ್ರೆಯನ್ನು ಏರ್ಪಡಿಸಲಾಗಿತ್ತು. ಈ ವೇಳೆ ರಥೋತ್ಸವದ ಗಾಲಿಗೆ ವ್ಯಕ್ತಿಯೋರ್ವ ಸಿಲುಕಿ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಗ್ರಾಮದಲ್ಲಿ ಶನಿವಾರ ಸಾಯಂಕಾಲ 6:00 ಗಂಟೆ ಸಮಯಕ್ಕೆ ಘನ ಗುರುಸಿದ್ದೇಶ್ವರ ಜಾತ್ರೆಯ ರಥೋತ್ಸವದ ವೇಳೆ ನಡೆದ ದುರ್ಘಟನೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ದೇವೇಂದ್ರ ಮನೋಹರ ಬಡಿಗೇರ (24) ಮೃತ ದುರ್ದೈವಿ ಎನ್ನಲಾಗಿದೆ.

ತೇರು ಎಳೆಯುವ ವೇಳೆ ಮೈ ಮೇಲೆ ರಥದ ಗಾಲಿ ಹರಿದು ಗಂಭೀರವಾಗಿ ಗಾಯಗೊಂಡಿದ್ದ ಸ್ಥಳೀಯರು ತಕ್ಷಣ ಆಸ್ಪತ್ರೆಗೆ ರವಾನಿಸಿದ್ದರು. ಆದ್ರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಕೊನೆ ಯುಸಿರೆಳೆದಿದ್ದಾನೆ. ಈ ಕುರಿತು ಕಲಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ ಎಂದು ಸುದ್ದಿಯಾಗಿರುತ್ತದೆ.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಭೀಮಪ್ಪ.ಹಚ್ಯಾಳ.ದೇವರ ಹಿಪ್ಪರಗಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button