ನೆಲ್ಲಿಕಟ್ಟೆ ಮಾರಕ್ಕ ಮಾತೆ ಸಂಗೀತ ಸಿರಿ ಮತ್ತು ಜ್ಞಾನದ ಸಿರಿ ಪ್ರಶಸ್ತಿ ಪ್ರಧಾನ ಸಮಾರಂಭ.
ಚಿತ್ರದುರ್ಗ ಸ.08

ಚಿತ್ರದುರ್ಗ ಜಿಲ್ಲೆಯ ನವಗ್ರಾಮ ನೆಲ್ಲಿಕಟ್ಟೆಯಲ್ಲಿ ಇಂದು ಕಾರ್ಯಕ್ರಮ ಹಮ್ಮಿ ಕೊಳ್ಳಲಾಗಿತ್ತು. ಭಯದಿಂದ ಭಕ್ತಿ, ಜ್ಞಾನ, ವೈರಾಗ್ಯ- ಶತಾಯುಷಿ ಹೊನ್ನೂರುಸಾಬ್.ಭರಮಸಾಗರ ಹೋಬಳಿ ನವಗ್ರಾಮ ನೆಲ್ಲಿಕಟ್ಟೆಯಲ್ಲಿ ಏರ್ಪಡಿಸಿದ್ದ ನೆಲ್ಲಿಕಟ್ಟೆ ಮಾರಕ್ಕಮಾತೆ ಜ್ಞಾನಸಿರಿ ಪ್ರಶಸ್ತಿ ಸ್ವೀಕರಿಸಿ ಮಾತಾಡಿದ ಶತಾಯುಷಿ, ಸಂಸ್ಕ್ರತಿ ಚಿಂತಕ, ನಿವೃತ್ತ ಶಿಕ್ಷಕರಾದ ಹೊನ್ನೂರುಸಾಬ್ ಅವರು ಭಯದಿಂದ ಭಕ್ತಿ ಉದಯಿಸುತ್ತದೆ.ಭಕ್ತಿಯಿಂದ ಜ್ಞಾನ ಸಿದ್ದಿಯಾಗುತ್ತದೆ. ಜ್ಞಾನದಿಂದ ವೈರಾಗ್ಯ ಉಂಟಾಗಿ ಈ ಬದುಕನ್ನು ಸಾರ್ಥಕ ಗೊಳಿಸುತ್ತದೆಂದು ತಿಳಿಸಿದರು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ಹೆತ್ತ ಹೊತ್ತವರ ಸಾಕುವುದರೊಳಗೆ ಜೀವನ ತೃಪ್ತಿಯಿದೆ. ಅಂತಹ ಸಂತೃಪ್ತ ಜೀವನ ಮಾರಕ್ಕಮಾತೆಯ ಮಕ್ಕಳದು. ಆ ಮಹಾ ತಾಯಿಯ ಹೆಸರನ್ನು ಚಿರಾಯುವಾಗಿಸಲಾಗಿದೆ ಎಂದರು.

ನೆಲ್ಲಿಕಟ್ಟೆ ಮಾರಕ್ಕಮಾತೆ ಸಂಗೀತ ಸಿರಿ ಪ್ರಶಸ್ತಿಯನ್ನು ಅನನ್ಯಕಲಾವಿದ ಬಸವರಾಜ್ ಹುಲ್ಲೆಹಾಳು ಅವರಿಗೆ ಪ್ರಧಾನ ಮಾಡಿದ ಯುಗಧರ್ಮ ರಾಮಣ್ಣ ಅವರು ಈ ಲೋಕದ ಸಂಕಟಗಳಿಂದ ಪಾರಾಗಲು ಜನ ಸೇವೆಯು ಸರಿದಾರಿ ತೋರಿಸುವುದು ಎಂದರು.ಬೆಳಗಟ್ಟದ ಕರಿಬಸವೇಶ್ವರಜ್ಜಯ್ಯಸ್ವಾಮಿ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಅಮ್ಮಮಹದೇವಮ್ಮ ಅವರು ಅಧ್ಯಕ್ಷತೆ ವಹಿಸಿದ್ದರು. ದಿವ್ಯ ಸಾನಿದ್ಯ ವಹಿಸಿ ಮಾತಾಡಿದ ಬಸವ ನಾಗೀದೇವ ಶರಣರು ಆಶ್ರೀವಾದ ನುಡಿಗಳ್ಳನ್ನಾಡಿದರು.ಕುವೆಂಪು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ನೆಲ್ಲಿಕಟ್ಟೆ ಎಸ್.ಸಿದ್ದೇಶ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಮುಖ್ಯ ಅತಿಥಿ ಪ್ರಹ್ಲಾದ್ ಜೆ.ನಾಡಿಗ್ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ನವೀನ್ ನಿರೂಪಿಸಿದರು. ಸಿ.ಎಂ.ನೇತ್ರಾವತಿ ವಂದಿಸಿದರು ಎಲ್ಲರ ಸಹಕಾರದೊಂದಿಗೆ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನೆರವೇರಿತು.
ವರದಿ:ಕೋಡಿಹಳ್ಳಿ.ಟಿ.ಶಿವಮೂರ್ತಿ.ಚಿತ್ರದುರ್ಗ