ಶಾಸಕರ ಸದಸ್ಯತ್ವ ರದ್ದು ಗೊಳಿಸುವಂತೆ ಒತ್ತಾಯಿಸಿ – ಎಸ್.ಪಿ ಯವರಿಂದ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಕೆ.
ಹೊಸಪೇಟೆ ಸ.16

ಪರಿಶಿಷ್ಟ ಜಾತಿ ಮತ್ತು ಒಕ್ಕಲಿಗ ಸಮುದಾಯವನ್ನು ಅವಹೇಳನ ಮಾಡಿ, ಅತ್ಯಂತ ಕೆಟ್ಟ ಶಬ್ದಗಳಲ್ಲಿ ನಿಂದಿಸಿದ ಶಾಸಕ ಮುನಿರತ್ನನನ್ನು ಕೂಡಲೇ ಬಂಧಿಸಿ ಜಾತಿ ನಿಂದನೆ ಕೇಸ್ ದಾಖಲಿಸಬೇಕು. ಮತ್ತು ಆತನ ಶಾಸಕ ಸದಸ್ಯತ್ವವನ್ನ ರದ್ದು ಪಡಿಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ನ ಜಿಲ್ಲಾ ಎಸ್.ಸಿ ಘಟಕ ವತಿಯಿಂದ ಸಿ.ಎಂ ಸಿದ್ದರಾಮಯ್ಯನವರಿಗೆ ಮತ್ತು ರಾಜ್ಯಪಾಲರಿಗೆ, ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮುಖಾಂತರ ಮನವಿ ಪತ್ರ ಸಲ್ಲಿಸಲಾಯಿತು.

ವಿಜಯನಗರ ಜಿಲ್ಲಾ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಅಧ್ಯಕ್ಷ ಸೋಮಶೇಖರ್ ಬಣ್ಣದಮನೆ, ಕಾಂಗ್ರೆಸ್ ಪಕ್ಷದ ಜಿಲ್ಲಾ ಉಪಾಧ್ಯಕ್ಷ ನಿಂಬಗಲ್ ರಾಮಕೃಷ್ಣ, ವಿಜಯನಗರ ಜಿಲ್ಲಾ ಕಾನೂನು ಘಟಕದ ಅಧ್ಯಕ್ಷ ಎಚ್.ಮಹೇಶ್, ಬಳ್ಳಾರಿ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಪೀರ್ ಭಾಷಾ, ವಿಜಯನಗರ ಜಿಲ್ಲಾ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್, ಯುವ ಬರಹಗಾರ ವಿಶಾಲ್ ಮ್ಯಾಸರ್, ಚಲವಾದಿಕೇರಿ ಪ್ರಕಾಶ್, ಸುನಿಲ್ ಕುಮಾರ್, ಜಯಣ್ಣ ಪಟ್ಟಿ, ದಮಾಣಿ ಅಂಬರೀಶ್, ಇಮ್ಮಿಯಾ, ಮೋಹನ್ ಕುಮಾರ್, ರಮೇಶ್ ಕುಮಾರ್, ಯೋಹನ್, ಸುನಿಲ್ ಕುಮಾರ್ ಚಿತ್ತವಾಡಗಿ, ಅಲ್ಲಾಭಕ್ಷಿ ಕಲಬುರ್ಗಿ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಇದ್ದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಮಾಲತೇಶ್.ಶೆಟ್ಟರ್.ಹೊಸಪೇಟೆ