ಸರ್ ಎಂ ವಿಶ್ವೇಶ್ವರಯ್ಯ ಜನ್ಮ ದಿನದ ಅಂಗವಾಗಿ – ಪ್ರಬಂಧ ಸ್ಪರ್ಧೆ.

ಹೂಡೇಂ ಸ.25

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೂಡೇo ಅರಿವು ಕೇಂದ್ರ ಗ್ರಂಥಾಲಯ ಮಾಹಿತಿ ಕೇಂದ್ರದಲ್ಲಿ ಪ್ರಬಂಧ ಸ್ಪರ್ಧೆ. ಸರ್ ಎಂ ವಿಶ್ವೇಶ್ವರಯ್ಯ ಇಂಜಿನಿಯರ್ ದಿನದ ಪ್ರಯುಕ್ತ ಇವರ ಬಗ್ಗೆ ಪ್ರಬಂಧ ಸ್ಪರ್ಧೆ ಮಾಡಿಸಲಾಯಿತು ಹಾಗೂ ಅರಿವು ಕೇಂದ್ರ ಗ್ರಂಥಾಲಯದಲ್ಲಿ ಮಕ್ಕಳು ಗ್ರಂಥಾಲಯದಲ್ಲಿ ನಾನು ಓದಿದ ಪುಸ್ತಕ ಅಭಿಯಾನ ಮಾಡಲಾಯಿತು. ಈ ಸಂದರ್ಭದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳು ತಾಯಕನಹಳ್ಳಿ ಹಾಗೂ ಶ್ರೀ ಗುರು ಕನಕ ವಿದ್ಯಾ ಕೇಂದ್ರದ ಮಕ್ಕಳು ನಮ್ಮ ಊರಿನ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಮಕ್ಕಳು ಅವರಿಗೆ ಇಷ್ಟವಾಗುವಂತಹ ಪುಸ್ತಕಗಳನ್ನು ಓದಿದರು. ಹಾಗೂ ನಾನು ಓದಿದ ಪುಸ್ತಕ ಎಂದು ಗಟ್ಟಿಯಾಗಿ ಓದಿದರು. ಮಕ್ಕಳು ಓದುವ ಬೆಳಕು ಕಾರ್ಯಕ್ರಮದಲ್ಲಿ ನಮಗೆ ಅರಿವು ಕೇಂದ್ರ ಗ್ರಂಥಾಲಯ ಬಹಳ ಉಪಯೋಗವಾಗುತ್ತಿದೆ ಎಂದು ತಿಳಿಸಿದರು. ಹಾಗೂ ಇನ್ನುಳಿದ ವಿದ್ಯಾರ್ಥಿಗಳು ಬಸವಣ್ಣನ ವಚನ ಅಕ್ಕಮಹಾದೇವಿ ವಚನಗಳನ್ನು ಹೇಳಿದರು. ಕೆಲ ವಿದ್ಯಾರ್ಥಿಗಳು ದೇಶಭಕ್ತಿ ಗೀತೆ ಹಾಡಿದರು. ಈ ದಿನ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಅಂಗವಾಗಿ ಹೆಣ್ಣು ಮಕ್ಕಳ ಬಗ್ಗೆ ಗ್ರಂಥಾಲಯ ಮೇಲ್ವಿಚಾರಕರು ತಿಳಿಸಿದರು. ಮಕ್ಕಳಿಗೆ ಸಿಹಿ ಹಂಚುವುದರ ಮೂಲಕ ನಾನು ಓದುವ ಪುಸ್ತಕ ಅಭಿಯಾನದ ಅಭಿಯಾನ ಮಾಡಲಾಯಿತು. ಅರಿವು ಕೇಂದ್ರ ಗ್ರಂಥಾಲಯ ಬಂದ ಮಕ್ಕಳಿಗೆ ಸಾರ್ವಜನಿಕರಿಗೆ ಗ್ರಂಥಾಲಯ ಓದುಗರಿಗೆ ಅಭಿನಂದನೆಗಳನ್ನು ತಿಳಿಸಲಾಯಿತು. ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಹೋಬಳಿ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಕೆ.ಎಸ್.ವೀರೇಶ್.ಕೆ.ಹೊಸಹಳ್ಳಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button