ಅಜೀಂ ಪ್ರೇಮ್ ಜಿ ಫೌಂಡೇಶನ್ ಬೆಂಗಳೂರು ಅವರ ಸಹ ಭಾಗಿತ್ವದಲ್ಲಿ ಶಾಲಾ ಮಕ್ಕಳ ಪೌಷ್ಟಿಕತೆ ವೃದ್ದಿಸಲು 6 ದಿನಗಳ ಪೂರಕ ಪೌಷ್ಟಿಕ ಆಹಾರ ವಿತರಣೆ.
ಕೂಡ್ಲಿಗಿ ಸ.25

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೂಡ್ಲಿಗಿ ಪಟ್ಟಣದ 6 ನೇ ವಾರ್ಡ್ಬ ನಲ್ಲಿರುವ ಶ್ರೀ ವಿನಾಯಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಧಾನ ಮಂತ್ರಿ ಪೋಷನ್ ಶಕ್ತಿ ನಿರ್ಮಾಣ ಮಧ್ಯಾಹ್ನದ ಉಪಹಾರ ಯೋಜನೆ ಅನ್ವಯ ಅಜೀಂ ಪ್ರೇಮ್ ಜಿ ಪ್ರತಿಷ್ಠಾನ ರವರ ಪ್ರಾಯೋಜಕತ್ವದ ಪೂರಕ ಪೌಷ್ಟಿಕ ಆಹಾರ ಪೂರೈಕೆ ಅಡಿಯಲ್ಲಿ ವಾರದ ನಾಲ್ಕು ದಿನಗಳ ಕಾಲ ಮೊಟ್ಟೆ ಬಾಳೆಹಣ್ಣು ಶೇಂಗಾ ಚಿಕ್ಕಿ ವಿತರಣಾ ಕಾರ್ಯಕ್ರಮವನ್ನು ಡಿಸೆಂಬರ್ 25 ರಂದು ಸರ್ಕಾರ ದೊಂದಿಗೆ ಮೂರು ವರ್ಷಗಳ ಅವಧಿ ರೂ 1,591. ಕೋಟಿ ರೂಪಾಯಿಗಳ ವೆಚ್ಚದ ಒಪ್ಪಂದ ಮಾಡಿ ಕೊಂಡಿದ್ದು, ಈ ಕಾರ್ಯಕ್ರಮದ 2024 -25 ನೇ. ಸಾಲಿನ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ 6 ದಿನಗಳು ಪೂರಕ ಪೌಷ್ಟಿಕ ಆಹಾರವನ್ನು ಉಚಿತವಾಗಿ ವಿತರಿಸುವ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ.

ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕ ಅಧ್ಯಕ್ಷರಾದ ಕಾಟೇರ ಹಾಲೇಶ್ ಹಾಗೂ ಕರ್ನಾಟಕ ಪತ್ರಕರ್ತ ಸಂಘದ ತಾಲೂಕ ಅಧ್ಯಕ್ಷರಾದ ರಾಘವೇಂದ್ರ ಸಾಲುಮನೆ ಇವರು ಮೊಟ್ಟೆ ತಿನ್ನುವಂತಹ ಮಕ್ಕಳಿಗೆ ಮೊಟ್ಟೆ ಹಾಗೂ ಮೊಟ್ಟೆ ತಿನ್ನದೇ ಇರುವಂಥ ಮಕ್ಕಳಿಗೆ ಮೊಟ್ಟೆ ಬದಲಾಗಿ ಬಾಳೆಹಣ್ಣು ವಿತರಣೆ ಮಾಡುವುದ ರೊಂದಿಗೆ ಶಾಲಾ ಮಕ್ಕಳೊಂದಿಗೆ ಶಾಲೆಯಲ್ಲಿ ತಯಾರಿಸಿದ ಬಿಸಿ ಊಟವನ್ನು ಮಕ್ಕಳ ಸಾಲಿನಲ್ಲಿ ಕೂತು ಬಿಸಿಯೂಟ ಸೇವಿಸಿದರು, ಈ ಸಂದರ್ಭದಲ್ಲಿ ವಿನಾಯಕ ಶಾಲೆಯ ಆಡಳಿತ ಅಧಿಕಾರಿಯಾದ ಶ್ರೀಮತಿ ಗೀತಾ ಹಾಗೂ ಶಿಕ್ಷಕರಾದ ಬುಳ್ಳಪ್ಪ ಪರಶುರಾಮ್, ಹಾಗೂ ಶಾಲೆಯ ಎಲ್ಲಾ ಶಿಕ್ಷಕ ಸಿಬಂದಿಗಳು ಇದ್ದರು.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನೆಲ್:ರಾಘವೇಂದ್ರ. ಬಿ.ಸಾಲುಮನೆ.ಕೂಡ್ಲಿಗಿ.ವಿಜಯನಗರ