ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿಶ್ವ ಆರೋಗ್ಯ ದಿನಾಚರಣೆಯಲ್ಲಿ – ಶಾಸಕರು ಭಾಗವಹಿಸಿದರು.
ರಾಂಪುರ ಏ.07

ಇಂದು ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಎನ್.ವೈ ಗೋಪಾಲಕೃಷ್ಣ ರವರು ಮೊಳಕಾಲ್ಮೂರು ತಾಲೂಕಿನ ಸಮುದಾಯ ಆರೋಗ್ಯ ಕೇಂದ್ರ ರಾಂಪುರದಲ್ಲಿ ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.ವೈದ್ಯಾಧಿಕಾರಿಗಳು ಯೊಂದಿಗೆ ಭೇಟಿ ಮಾಡಿ ಎಲ್ಲಾ ವರ್ಗದ ಬಡವರಿಗೆ ಸರಿಯಾದ ರೀತಿಯಿಂದ ಆರೋಗ್ಯ ಚಿಕಿತ್ಸೆಯನ್ನು ಕೊಡಬೇಕು ಬಂದಿರ್ತಕ್ಕಂತ ರೋಗಿಗಳಿಗೆ ಅಡಚಣೆ ಮಾಡದಂತೆ ಸರಿಯಾದ ರೀತಿಯಿಂದ ಆರೋಗ್ಯ ಚಿಕಿತ್ಸೆ ಕೊಡಬೇಕು ಎಂದು ಎನ್.ವೈ ಗೋಪಾಲಕೃಷ್ಣ ಶಾಸಕರು ಅಧಿಕಾರಿಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಇಲಾಖೆ ಸಿಬ್ಬಂದಿಗಳು ಆಶಾ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ರಾಂಪುರ ಗ್ರಾಮದ ಮುಖಂಡರು ಪ್ರಮುಖರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ತಿಪ್ಪೇಸ್ವಾಮಿ.ಹೊಂಬಾಳೆ.ಮೊಳಕಾಲ್ಮುರು