ನಾಳೆ ವಿಶ್ವ ಕನ್ನಡ ಕಲಾ ಸಂಸ್ಥೆ ವತಿಯಿಂದ ಐದನೇ ರಾಜ್ಯ ಮಟ್ಟದ ವಿಶ್ವ ಕನ್ನಡ ಸಾಹಿತ್ಯ ಮತ್ತು ಪರಿಸರ ಜಾಗೃತಿ ಸಮ್ಮೇಳನ.
ಹುಲಿಕೆರೆ ಆ.16

ಕೂಡ್ಲಿಗಿ ತಾಲೂಕಿನ ಹುಲಿಕೆರೆ ಆನಂದ ವಿಹಾರ, ಆನಂದ ನರ್ಸರಿ ವಿಶ್ವ ಕನ್ನಡ ಕಲಾ ಸಂಸ್ಥೆ ವತಿಯಿಂದ ಐದನೇ ರಾಜ್ಯಮಟ್ಟದ ವಿಶ್ವ ಕನ್ನಡ ಸಾಹಿತ್ಯ ಮತ್ತು ಪರಿಸರ ಜಾಗೃತಿ ಸಮ್ಮೇಳನ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಕವಿಗೋಷ್ಠಿ ಹಾಗೂ ವಿವಿಧ ಕ್ಷೇತ್ರಗಳಲ್ಲಿನ ಸಾಧಕರಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ. ಕಾರ್ಯಕ್ರಮದ ದಿವ್ಯ ಸಾನಿಧ್ಯ ದಾ.ಮ.ಐಮಡಿ ಶರಣಾರ್ಯರು ಧರ್ಮಾಧಿಕಾರಿಗಳು ದಾಸೋಹ ಮಠ ಕಾನಮಡಗು ಮತ್ತು ಸಮ್ಮೇಳನ ಸರ್ವಾಧ್ಯಕ್ಷರು ಡಾ, ಮಹೇಂದ್ರ ಕುರ್ಡಿರವರು, ಉದ್ಘಾಟಕರಾಗಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ವಿಶ್ವೇಶ್ವರ ಸಜ್ಜನ್, ವೈ.ಬಿ.ಹೆಚ್ ಜಯದೇವ್ ಅಧ್ಯಕ್ಷರು ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು, ಸಂತೋಷ್.ಹಾನಗಲ್ ಪ್ರಧಾನ ಕಾರ್ಯದರ್ಶಿ. ಕನ್ನಡ ಅಭಿವೃದ್ಧಿ ಪ್ರಾಧಿಕಾರ ವಿಧಾನ ಸೌಧ, ಡಾ, ಸಿ.ಸೋಮಶೇಖರ್ ಅಧ್ಯಕ್ಷರು. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಭೀಮಣ್ಣ ಗಜಾಪುರ ಕನ್ನಡ ಪ್ರಭ ವರದಿಗಾರರು ಮತ್ತು ಸಾಹಿತಿಗಳು, ಡಾ, ಬಸವರಾಜು.ಕೆ.ಇ ಗ್ರೂಪ್ ಆಫ್ ಕಂಪನಿ ಸಂಸ್ಥಾಪಕರು, ಸೇರಿ ಅನೇಕ ಸಾಹಿತಿಗಳು, ವಿದ್ವಾಂಸರು, ಗಣ್ಯರು, ಕವಿಗಳು, ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮತ್ತು ಕಾಯಕ ಯೋಗಿ ಸೊನ್ನಲ್ಲಿಗಿ ಸಿದ್ದರಾಮೇಶ್ವರ ಪ್ರಶಸ್ತಿ ಪುರಸ್ಕೃತರು, ಜ್ಞಾನಯೋಗಿ ಶಿವ ಶರಣೆ ಅಕ್ಕ ಮಹಾದೇವಿ ಪ್ರಶಸ್ತಿ ಪುರಸ್ಕೃತರು ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಸಂಸ್ಥಾಪಕ ಅಧ್ಯಕ್ಷರು ವಿಶ್ವ ಕನ್ನಡ ಕಲಾ ಸಂಸ್ಥೆ ಡಾ, ಈ.ರವೀಶ್ ರವರು ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.
ಹೋಬಳಿ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಕೆ.ಎಸ್.ವೀರೇಶ್.ಕೆ.ಹೊಸಹಳ್ಳಿ.