ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೃಹತ್ ಸಮಾವೇಶದಲ್ಲಿ ಭಾಗವಹಿಸುವಂತೆ – ಖಾಲಿದ್ ಖಾದ್ರಿ ಕರೆ.

ಮಾನ್ವಿ ಅ.03

ಅಕ್ಟೋಬರ್ 5 ರಂದು ಮಾನ್ವಿ ಪಟ್ಟಣದ ಸೂರ್ಯ ಫಂಕ್ಷನ್ ಹಾಲ್ ಬಳಿ ಕಾಂಗ್ರೆಸ್ ಪಕ್ಷದಿಂದ ಸ್ವಾಭಿಮಾನಿ ಸಮಾವೇಶ ನಡೆಯಲಿದ್ದು, ಅಹಿಂದ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕಾಂಗ್ರೆಸ್ ಮುಖಂಡ ಖಾಲಿದ್ ಖಾದ್ರಿ ತಿಳಿಸಿದರು.

ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಸೂರ್ಯ ಫಂಕ್ಷನ್ ಹಾಲ್ ನಲ್ಲಿ ಸಭೆ ನಡೆಸಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾನ್ವಿ ನಗರಕ್ಕೆ ಆಗಮಿಸಿ ನಾನಾ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ವಾಭಿಮಾನಿ ಸಮಾವೇಶಕ್ಕೆ ಜಿಲ್ಲೆಯ ಕಾರ್ಯಕರ್ತರು ಆಗಮಿಸಿ ಕಾರ್ಯಕರ್ತರು ಸ್ವಾಭಿಮಾನಿ ಸಮಾವೇಶ ಏನೆಂದು ತೋರಿಸಬೇಕು ಎಂದು ಕರೆ ನೀಡಿದರು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ಮಾನ್ವಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button