ಶ್ರೀ ಹೇಮರಡ್ಡಿ ಮಲ್ಲಮ್ಮ ದೇವಾಲಯ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಸಂಸ್ಥೆಯಿಂದ – 150000/- ಮೊತ್ತದ ಡಿಡಿ ಹಸ್ತಾಂತರಿಸಿದರು.

ಚಿಕ್ಕ ಓತಗೇರಿ ಡಿ.19

ಬಾಗಲಕೋಟೆ ಜಿಲ್ಲೆಯ ಇಲಕಲ್ಲ ತಾಲೂಕಿನ ಚಿಕ್ಕ ಓತಗೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ವಾಗುತ್ತಿರುವ ಶ್ರೀ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ 150000/- ಮೊತ್ತದ ಡಿಡಿಯನ್ನು ಜಿಲ್ಲಾ ನಿರ್ದೇಶಕರಾದ ಚೆನ್ನಕೇಶವ ಅವರು ದೇವಸ್ಥಾನ ಸಮಿತಿ ಪದಾಧಿಕಾರಿಗಳಿಗೆ ಹಸ್ತಾಂತರ ಮಾಡಿದರು.ಈ ಸಂದರ್ಭದಲ್ಲಿ ಹುನಗುಂದ ತಾಲೂಕಿನ ಯೋಜನಾ ಅಧಿಕಾರಿಗಳಾದ ಸಂತೋಷ ಹಾಗೂ ವಲಯ ಮೇಲ್ವಿಚಾರಕಿ ಆಶಾ ಸ್ಥಳೀಯ ಸೇವಾ ಪ್ರತಿನಿಧಿ ಊರಿನ ಗಣ್ಯರು ಗ್ರಾಮಸ್ಥರು. ಸ್ವ ಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button