ಶ್ರೀವಿಷ್ಣು ಸಹಸ್ರನಾಮದ ಮಹಿಮೆ ಅಗಾಧವಾದದ್ದು- ಶ್ರೀಮತಿ ಹೆಚ್.ಲಕ್ಷ್ಮೀದೇವಮ್ಮ ಅಭಿಪ್ರಾಯ.
ಚಳ್ಳಕೆರೆ ಮೇ.23

ಶ್ರೀವಿಷ್ಣು ಸಹಸ್ರನಾಮದ ಮಹಿಮೆ ಅಪಾರವಾದದ್ದು ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಸದ್ಭಕ್ತರಾದ ಶ್ರೀಮತಿ ಹೆಚ್ ಲಕ್ಷ್ಮೀದೇವಮ್ಮ ಅಭಿಪ್ರಾಯ ಪಟ್ಟರು. ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ವತಿಯಿಂದ ನಗರದ ಶ್ರೀಶಾರದಾಶ್ರಮದ ಸದ್ಭಕ್ತರಾದ ಶ್ರೀಮತಿ ಮೋಹಿನಿ ಸತ್ಯನಾರಾಯಣ ಅವರ ನಿವೇದಿತಾ ನಿವಾಸದಲ್ಲಿ ಹಮ್ಮಿಕೊಂಡಿದ್ದ ವಾರದ ಸತ್ಸಂಗ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು “ಶ್ರೀವಿಷ್ಣು ಸಹಸ್ರನಾಮ” ದ ಬಗ್ಗೆ ಉಪನ್ಯಾಸ ನೀಡಿದರು.

ಈ ಸತ್ಸಂಗದ ಪ್ರಯುಕ್ತ ಶ್ರೀಶಾರದಾಶ್ರಮದ ಸದ್ಭಕ್ತರಿಂದ ಸಾಮೂಹಿಕ ಶ್ರೀರಾಮರಕ್ಷಾ ಸ್ತೋತ್ರ ಪಠಣ, ಭಜನೆ ಮತ್ತು “ಶ್ರೀಶಾರದಾದೇವಿ ಜೀವನಗಂಗಾ” ಗ್ರಂಥ ಪಾರಾಯಣ ಕಾರ್ಯಕ್ರಮವನ್ನು ಯತೀಶ್.ಎಂ ಸಿದ್ದಾಪುರ ನಡೆಸಿ ಕೊಟ್ಟರು. ಈ ಕಾರ್ಯಕ್ರಮದಲ್ಲಿ ಶ್ರೀಶಾರದಾಶ್ರಮದ ಸದ್ಭಕ್ತರಾದ ಶ್ರೀಮತಿ ಮೋಹಿನಿ ಸತ್ಯನಾರಾಯಣ, ನಿವೇದಿತಾ ದಿನೇಶ್, ಸುನೀತ ಗೋಪಾಲಕೃಷ್ಣ, ನಿವೃತ್ತ ಉಪನ್ಯಾಸಕಿ ರುಕ್ಮಿಣಿ, ಮೀನಾ ರಾಜಶೇಖರ್, ವೈಷ್ಣವಿ, ಪುನೀತ್, ಜಗನ್, ಮೀನಾಕ್ಷಿ, ಮಾಲಾ, ಪುಷ್ಪ,ಸರೀತ ಇದ್ದರು.
ವರದಿ-ಯತೀಶ್.ಎಂ ಸಿದ್ದಾಪುರ,ಚಳ್ಳಕೆರೆ .