ಹಾವು ಕಚ್ಚಿ ಮಹಿಳೆ ಸಾವು.
ಇದ್ದಲಗಿ ಮೇ.14

ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ವೇಳೆಯಲ್ಲಿ ಹಾವು ಕಚ್ಚಿ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆಯೊರ್ವಳು ಸಾವನ್ನಪ್ಪಿದ ಘಟನೆ ಮಂಗಳವಾರ ಹುನಗುಂದ ತಾಲೂಕಿನ ಇದ್ದಲಗಿ ಗ್ರಾಮದಲ್ಲಿ ನಡೆದಿದೆ.ಸಾವಿತ್ರಿ ಗಜಾನನ ಅಜ್ಜನವರ (೪೦) ಹಾವು ಕಚ್ಚಿ ಸಾವನ್ನಪ್ಪಿದ ದುರ್ದೈವಿ ಮಹಿಳೆಯಾಗಿದ್ದಾರೆ.ಘಟನೆ ವಿವರ-ಇದ್ದಲಗಿ ಗ್ರಾಮದ ನಿವಾಸಿ ಸಾವಿತ್ರಿ ಗಜಾನನ ಅಜ್ಜನವರ ಪ್ರತಿ ದಿನದಂತೆ ಗ್ರಾಮದ ತಮ್ಮ ಹೊಲವೊಂದರಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ಸಂದರ್ಭದಲ್ಲಿ ಹಾವು ಕಚ್ಚಿದ್ದು,ಚಿಕಿತ್ಸೆಗಾಗಿ ಬಾಗಲಕೋಟ ಆಸ್ಪತ್ರೆಗೆ ಕರೆದೋಯಲಾಯಿತು. ಅಲ್ಲಿ ಜೀವನ್ಮರಣದ ಮಧ್ಯೆ ಹೋರಾಟ ಮಾಡಿದ ಸಾವಿತ್ರಿ ಅಜ್ಜನವರ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಬೆಳಗ್ಗೆ ೧೧ ಗಂಟೆಗೆ ಸಾವನ್ನಪ್ಪಿದ್ದಾಳೆ. ಹುನಗುಂದ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಿಹಾರಕ್ಕೆ ಆಗ್ರಹ-ಹಾವು ಕಚ್ಚಿ ಮೃತಪಟ್ಟ ಇದ್ದಲಗಿ ಗ್ರಾಮದ ಮಹಿಳೆ ಸಾವಿತ್ರಿ ಗಜಾನನ ಅಜ್ಜನವರ ಅವರ ಕುಟುಂಬಕ್ಕೆ ಪರಿಹಾರವನ್ನು ಕೂಡಲೇ ಸರಕಾರ ವತಿಯಿಂದ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲೂಕಾ ಕಾರ್ಯಾಧ್ಯಕ್ಷ ಗುರು ಗಾಣಿಗೇರ,ಜಿಲ್ಲಾ ಉಪಾಧ್ಯಕ್ಷ ಶಶಿಕಾಂತ ಬಂಡರಗಲ್ಲ,ಅಧ್ಯಕ್ಷ ಬಸನಗೌಡ ಪೈಲ್, ರಸೂಲಸಾಬ ತಹಸೀಲ್ದಾರ ಆಗ್ರಹಿಸಿದ್ದಾರೆ.
ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಮಲ್ಲಿಕಾರ್ಜುನ.ಎಂ.ಬಂಡರಗಲ್ಲ ಹುನಗುಂದ.