ಎಸ್.ಎ.ವಿ.ಟಿ. ಕಾಲೇಜ್ ನ ಯುವಕ – ಯುವತಿಯರು 50ಕ್ಕೂ ಹೆಚ್ಚು ರಕ್ತದಾನ ಮಾಡಿದ ವಿದ್ಯಾರ್ಥಿಗಳು.
ಕೂಡ್ಲಿಗಿ ಜುಲೈ.24
ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ದಿನಾಂಕ 21-7-23 ರಂದುSAVT ಕಾಲೇಜ್ ಕೂಡ್ಲಿಗಿಯಲ್ಲಿ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ವಿಜಯನಗರ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ವಿಜಯನಗರ ಎಸ್.ಎ. ವಿ.ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೂಡ್ಲಿಗಿ ಎನ್. ಎಸ್.ಎಸ್.ಎ ಮತ್ತು ಬಿ ಘಟಕ ಸ್ವಾಮಿ ವಿವೇಕಾನಂದ ರಕ್ತ ಭಂಡಾರ ಹಾಗೂ ಆರೋಹಣ ಸೊಸೈಟಿ ಫಾರ್ ಸೋಶಿಯಲ್ ಡೆವಲಪ್ಮೆಂಟ್ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು,ಈ ಒಂದು ಸಂದರ್ಭದಲ್ಲಿ ಪ್ರಾರ್ಥನೆಯನ್ನು ಕುಮಾರಿ ದಿವ್ಯ ಇವರು ನೆರವೇರಿಸಿದರು.

ಕಾರ್ಯಕ್ರಮಕ್ಕೆ ಆಗಮಿಸಿದ್ದ ಗಣ್ಯರನ್ನು ಕುಮಾರಿ ಪ್ರಿಯದರ್ಶಿನಿ ಸ್ವಾಗತಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಉಪನ್ಯಾಸಕರಾದ ಶ್ರೀ ಮಂಜುನಾಥ ಇವರು ಕಾರ್ಯಕ್ರಮದ ಕುರಿತು ಮಾತನಾಡುತ್ತಾ ಎಲ್ಲಾ ದಾನಗಳಲ್ಲಿ ರಕ್ತದಾನ ಶ್ರೇಷ್ಠದಾನ ವಾಗಿದ್ದು, ಇದರಿಂದ ನಾಲ್ಕು ಜನಗಳ ಜೀವ ಉಳಿಸುವ ಕಾರ್ಯ ಆಗುತ್ತೆ ಹಾಗಾಗಿ ನಾವೆಲ್ಲರೂ ಸ್ವಯಂ ಪ್ರೇರಣೆಯಿಂದ ರಕ್ತದಾನವನ್ನು ಮಾಡೋಣ ಎಂದು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿ ಮಾತನಾಡಿದರು. ವೇದಿಕೆಯಲ್ಲಿದ್ದ ಉಪನ್ಯಾಸಕರಾದ ಡಾ. ಉಮೇಶ್ ಹಾಗೂ ತಾಲೂಕಾ ಆಸ್ಪತ್ರೆಯ ಆಪ್ತ ಸಮಾಲೋಚಕರಾದ ಕೆ. ಪ್ರಶಾಂತ್ ಕುಮಾರ್ ಅವರು ಮಾತನಾಡುತ್ತ ರಕ್ತದಾನವನ್ನು ಯಾರು ಮಾಡಬಹುದು ರಕ್ತದಾನ ಮಾಡುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ಮಾತನಾಡಿದರು. ನಂತರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಎನ್. ಕಲ್ಲಪ್ಪ ಅವರು ಮಾತನಾಡುತ್ತಾ ವಿದ್ಯಾರ್ಥಿಗಳಿಗೆ ಮಾನವೀಯ ಮೌಲ್ಯಗಳನ್ನು ನಾವು ಮೈಗೂಡಿಸಿಕೊಳ್ಳಬೇಕು ಹಾಗೆಯೆ ಇಂತಹ ಶ್ರೇಷ್ಠ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆಯುತ್ತಿರಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರಾದ ಗುರುಬಸವರಾಜ್ ನಿಂಗಪ್ಪ ಕಮತಿ ಡಾಕ್ಟರ್. ಪ್ರಶಾಂತ್ ಕಾಲೇಜಿನ ಎಲ್ಲಾ ಉಪನ್ಯಾಸಕ ವರ್ಗದವರು ರಕ್ತ ಭಂಡಾರದ ಸಿಬ್ಬಂದಿಗಳು ತಾಲೂಕ ಸಾರ್ವಜನಿಕ ಆಸ್ಪತ್ರೆ ಸಿಬ್ಬಂದಿಗಳಾದ ಶ್ರೀ ಬೋರಣ್ಣ, ಆರ್ ಕೆ,ಎಸ್ಎಸ್. ಕೆ ಆಪ್ತ ಸಮಾಲೋಚಕರು ಓಬಣ್ಣ,ಸೋಮಶೇಖರ್, ಜೆ ಜಿ ಆರೋಣ ಸ್ವಯಂ ಸೇವಾ ಸಂಸ್ಥೆಯ ಸಿಬ್ಬಂದಿಗಳು ಇದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ವಂದನಾರ್ಪಣೆಯನ್ನು ಕುಮಾರಿ ಕಾವ್ಯ ನಿರೂಪಣೆಯನ್ನು ಅಭಿಲಾಶ್ ಮಾಡಿ ಸುಮಾರು 50ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಸ್ವಯಂ ಪ್ರೇರಿತವಾಗಿ ರಕ್ತದಾನವನ್ನು ಮಾಡಿ 250 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗ್ರೂಪಿಂಗ್ ಪರೀಕ್ಷೆ ಮಾಡಿಸಿ ಕೊಂಡು ಕಾರ್ಯಕ್ರಮ ಯಶಸ್ವಿಗೊಳಿಸಿದರು.ತಾಲೂಕ ವರದಿಗಾರರು:ರಾಘವೇಂದ್ರ. ಸಾಲುಮನೆ. ಕೂಡ್ಲಿಗಿ