ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಭೆ.
ದೇವರ ಹಿಪ್ಪರಗಿ ಅ.30

4 ರಂದು ಪಟ್ಟಣದ ಹೊಸ ನಗರದ ಟಿಪ್ಪುಸುಲ್ತಾನ ವೃತ್ತದ ಬಳಿ ರಾಜ್ಯೋತ್ಸವ ಗೆಳೆಯರ ಬಳಗದ ವತಿಯಿಂದ ಕನ್ನಡ ಹಬ್ಬ ಏರ್ಪಡಿಸಲಾಗಿದೆ ಎಂದು ಗೆಳೆಯರ ಬಳಗದ ರೆಹಮಾನ ಕಣಕಾಲ್ ಹೇಳಿದರು.ಬುಧವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಮವಾರ ಸಂಜೆ ನಡೆಯುವ ಕನ್ನಡ ಹಬ್ಬ ಕಾರ್ಯಕ್ರಮದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ತಾಲೂಕಿನ ಕನ್ನಡಪರ ಸಂಘಟನೆಗಳು, ಕನ್ನಡಿಗರು ಪಾಲ್ಗೊಳ್ಳಬೇಕು. ಇದೇ ಸಂದರ್ಭದಲ್ಲಿ ನಾಡು ನುಡಿಗಾಗಿ ಶ್ರಮಸಿದ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಗುವುದು. ವಿಶೇಷವಾಗಿ 55 ಎಚ್ಪಿ ಟ್ರ್ಯಾಕ್ಟರ್ ಜಗ್ಗುವ ಸ್ಪರ್ಧೆ ಏರ್ಪಡಿಸಲಾಗಿದೆ. ಇದಕ್ಕೂ ಮುಂಚೆ ಡಾ, ಅಂಬೇಡ್ಕರ ವೃತ್ತದಿಂದ ಬಸ್ ನಿಲ್ದಾಣ, ತಾಳಿಕೋಟಿ ರಸ್ತೆಯ ಮೂಲಕ ಕನ್ನಡಾಂಬೆಯ ಭಾವ ಚಿತ್ರದ ಭವ್ಯ ಮೆರವಣಿಗೆ ಜರುಗಲಿದೆ.

ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ಹಲಿಗೆ ಮೇಳ ದೊಂದಿಗೆ ಶಾಲಾ ಮಕ್ಕಳು, ಕನ್ನಡಪರ ಸಂಘಟನೆಗಳು, ಸಾರ್ವಜನಿಕರ ಜೊತೆಗೂಡಿ ಟಿಪ್ಪುಸುಲ್ತಾನ ವೃತ್ತದವರೆಗೆ ಮೆರವಣಿಗೆ ನಡೆಯಲಿದ್ದು, ಬಹಿರಂಗ ಸಮಾವೇಶ ಜರುಗಲಿದೆ. ಸಂಜೆ ಟ್ವಿವಿ ಸಿನಿಮಾ ಕಲಾವಿದರಿಂದ ರಸಮಂಜರಿ ಜರುಗಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡ ಅಭಿಮಾನಿಗಳು ಪಾಲ್ಗೊಂಡು ಯಶಸ್ವಿಗೊಳಿಸ ಬೇಕೆಂದು ಮನವಿ ಮಾಡಿದರು.ಹೊಸ ನಗರದ ಅವುಗೇಶ್ವರ ತಪೋವನ ಪರದೇಶಿಮಠದ ಶಿವಯೋಗಿಶ್ವರ ಸ್ವಾಮೀಜಿ ಮಾತನಾಡಿ, ಗೆಳೆಯರ ಬಳಗದ ವತಿಯಿಂದ ಹಮ್ಮಿಕೊಳ್ಳಲಾದ ಕನ್ನಡ ಹಬ್ಬಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು. ನಾಡು ನುಡಿಗಾಗಿ ಹಮ್ಮಿಕೊಂಡ ಈ ಕಾರ್ಯಕ್ರಮ ನಮ್ಮ ಮನೆಯ ಕಾರ್ಯಕ್ರಮ ವಾಗಬೇಕು. ತನು ಮನ ಧನದಿಂದ ಸಹಕಾರ ನೀಡಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕನ್ನಡಾಂಬೆ ಸೇವೆಗೆ ಸಿದ್ಧರಾಗಬೇಕು ಎಂದು ಕರೆ ನೀಡಿದರು. ಪತ್ರಿಕಾ ಗೋಷ್ಠಿಯಲ್ಲಿ ಶಾಹೀದ್ ರೂಗಿ, ಸುನೀಲ್ ಕನಮಡಿ, ಅಶೋಕ ಯಾದವ, ಹಬ್ಬುಸಾಬ ಮಣೂರ, ರಾವುತ್ ಹುಮನಾಬಾದ ಸೇರಿದಂತೆ ವಿವಿಧ ಸಂಘಟನೆ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಭೀಮಪ್ಪ.ಹಚ್ಯಾಳ.ದೇವರ ಹಿಪ್ಪರಗಿ