ಶ್ರೀ ಗುರು ಕೊಟ್ಟೂರೇಶ್ವರ ದೇವಸ್ಥಾನಕ್ಕೆ ಪ್ರಭಾರಿ ಕಾರ್ಯ ನಿರ್ವಹಣಾಧಿಕಾರಿ – ವಿ.ಹನುಮಂತಪ್ಪ ನೇಮಕ.
ಕೊಟ್ಟೂರು ನ.01

ಪಟ್ಟಣದ ಆರಾಧ್ಯ ದೈವವಾದ ಶ್ರೀ ಗುರು ಕೊಟ್ಟೂರೇಶ್ವರ ದೇವಸ್ಥಾನ ಮತ್ತು ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನ ಪ್ರಭಾರಿ ಕಾರ್ಯ ನಿರ್ವಹಣಾಧಿಕಾರಿಯಾಗಿ ವಿ.ಹನುಮಂತಪ್ಪ ಅವರು ತಾತ್ಕಾಲಿಕವಾಗಿ ಹುದ್ದೆಯಲ್ಲಿ ಮುಂದು ವರೆಯಲಿದ್ದಾರೆ. ಸರ್ಕಾರದ ಮುಂದಿನ ಆದೇಶದವರಿಗೆ ಅಧಿಕಾರದಲ್ಲಿರುವುದಾಗಿ ತಿಳಿಸಿದರು. ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿಯ ದರ್ಶನ ಪಡೆದು ಶ್ರೀ ಸ್ವಾಮಿಯ ಶ್ರೇಯ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಿ.ಹೆಚ್ ದೊಡ್ಡ ರಾಮಣ್ಣ ಮಾಜಿ ಉಪಾಧ್ಯಕ್ಷರು ಜಿಲ್ಲಾ ಪಂಚಾಯಿತಿ ಹಾಗೂ ಕಾಂಗ್ರೆಸ್ ಮುಖಂಡರು ಮಲ್ಲನಾಯಕನಹಳ್ಳಿ ಕೊಟ್ರಯ್ಯ ಸಹ ಧರ್ಮಕರ್ತರು ಪರಮೇಶ್ವರಯ್ಯ ಕೆ ಅಯ್ಯನಳ್ಳಿ ಪ್ರದೀಪ್, ಕಾರ್ತಿಕ್, ಹಾಗೂ ದೇವಸ್ಥಾನದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನೆಲ್: ಪ್ರದೀಪ್.ಕುಮಾರ್.ಸಿ.ಕೊಟ್ಟೂರು