ಓತಿಹಾಳ ಪಿ.ಕೆ.ಪಿ.ಎಸ್ ಮುಂದೆ ಧರಣಿ ಸತ್ಯಾಗ್ರಹ.

ಓತಿಹಾಳ ನ.09

ಸಿಂದಗಿ ತಾಲೂಕಿನ ಓತಿಹಾಳ ಗ್ರಾಮದ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಆವರಣದಲ್ಲಿ ಅನಿರ್ಧಿಷ್ಠಾವದಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ಓತಿಹಾಳ ಪಿಕೆಪಿಎಸ್ ಸಂಘದಲ್ಲಿ ಹಣ ದುರುಪಯೋಗ ಮಾಡಿಕೊಂಡು ಇಲಾಖೆಯಿಂದ ಸಾಬೀತಾಗಿ ಸಂಘದಿಂದ ವಜಾಗೊಂಡ ಮಾಜಿ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ ಅಂಬಣ್ಣ ಶಂ. ಹೂಗಾರ ಅವರನ್ನು ಕಾನೂನು ಭಾಹಿರವಾಗಿ ನೇಮಕ ಮಾಡಿಕೊಂಡ ಸದ್ಯದ ಆಡಳಿತ ಮಂಡಳಿಯವರು ಇವರನ್ನು ವಜಾ ಗೊಳಿಸಬೇಕು ಎಂದು ಬಾಬು ನಾಟೀಕಾರ ಆಗ್ರಹಿಸಿದರು.

ತಾಲೂಕಿನ ಓತಿಹಾಳ ಗ್ರಾಮದ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಆವರಣದಲ್ಲಿ ಹಮ್ಮಿಕೊಂಡ ಅನಿರ್ಧಿಷ್ಠಾವದಿ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದ ಅವರು, ಕಾನೂನು ಭಾಹಿರವಾಗಿ ಅವರನ್ನು ನೇಮಕ ಮಾಡಿಕೊಂಡ ವ್ಯವಸ್ಥೆಯ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಬೇಕು ಎಂಬ ಉದ್ದೇಶದಿಂದ ಈ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ. ಇಲಾಖೆ ನಮ್ಮ ಧರಣಿ ಸತ್ಯಾಗ್ರಹಕ್ಕೆ ಓಗೊಟ್ಟು ಕಾನೂನಾತ್ಮಕವಾಗಿ ಸೂಕ್ತ ನ್ಯಾಯವನ್ನು ಒದಗಿಸಬೇಕು ಎಂದರು. ಈ ವೇಳೆ ಬ್ಯಾಂಕಿನ ಆಡಳಿತ ಮಂಡಳಿಯ ಸದಸ್ಯರಾದ ಅಶೋಕ ಮಣೂರ, ಸೋಮಣ್ಣ ಪೂಜಾರಿ, ಭೀಮರಾಐ ಮಕಣಾಪೂರ, ನೀಲಮ್ಮ ನಾಕೆತ್ತಿನ, ಸಂಗಮ ಕೊರಬು, ಸಿದ್ದಮ್ಮ ನಾಟೀಕಾರ, ಗ್ರಾಮ ಪಂಚಾಯತ್ ಸದಸ್ಯರಾದ ಸುವರ್ಣಾ ಮಕಣಾಪೂರ, ಜಗದೀಶ ಮಾಲೇಗಾರ, ಮಲ್ಲು ನಾಕೆತ್ತಿನ, ಆಸೀಫ್ ಗುಂಜಟ್ಟಿ, ರಾಜು ವಠಾರ, ಗ್ರಾಮದ ರೈತ ಮುಖಂಡ ಮಲ್ಲನಗೌಟ ಪಾಟೀಲ, ಶಂಕರಗೌಡ ಜುಮನಾಳ, ಶಿವಾನಂದ ಸಾಲಿಮಠ, ಮಂಜು ಮನೂರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಭೀಮಪ್ಪ.ಹಚ್ಯಾಳ.ದೇವರ ಹಿಪ್ಪರಗಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button