ವರದಿಯಾದ ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ ಅಧಿಕಾರಿಗಳು – ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದರು.

ಮರಿಯಮ್ಮನಹಳ್ಳಿ ನ.15

ಹೋಬಳಿ ವ್ಯಾಪ್ತಿಯ 112 ವೆಂಕಟಪುರ ಗ್ರಾಮದಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಯನ್ನು ಕಳಪೆಯಾಗಿ ನಿರ್ಮಿಸಿದ್ದಾರೆಂದು ಇಲ್ಲಿನ ಗ್ರಾಮಸ್ಥರು ದೂರಿದ್ದಾರೆ ಎನ್ನುವ ಕುರಿತು.”ಸರ್ಕಾರಿ ಶಾಲಾ ಕಟ್ಟಡ ಕಳಪೆ ಕಾಮಗಾರಿ, ಸರ್ಕಾರದ ಬೊಕ್ಕಸಕ್ಕೆ ನಷ್ಟ, ಗ್ರಾಮಸ್ಥರ ಆರೋಪ. ಎನ್ನುವ ಶೀರ್ಷಿಕೆ ಅಡಿ “ನಾಗರಿಕ” ಕನ್ನಡ ದಿನ ಪತ್ರಿಕೆಯಲ್ಲಿ ನವೆಂಬರ್ 14 ರಂದು ವಿಸ್ತೃತ ವರದಿ ಪ್ರಕಟಿಸಿತ್ತು.ವರದಿ ಬೆನ್ನಲ್ಲೇ ಸ್ಪಂದಿಸಿದ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಇಲಾಖೆಯಿಂದ ಕಾರ್ಯನಿರ್ವಾಹಕ ಇಂಜಿನಿಯರ್ ಸಾಯಿಬಣ್ಣ ಮತ್ತು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸುರೇಶ್ ಇಂದು 112 ವೆಂಕಟಾಪುರ ಗ್ರಾಮದಲ್ಲಿನ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ. ಕೊಠಡಿಯ ಕಟ್ಟಡ ಕಾಮಗಾರಿ ವೀಕ್ಷಿಸಿ. ಕುರಿತು ಹೆಚ್ಚಿನ ಮಾಹಿತಿ ಪಡೆದು ಗುತ್ತಿಗೆದಾರರನ್ನು ತರಾಟೆಗೆ ತೆಗೆದು ಕೊಂಡು ನಿಯಮನುಸಾರ ಕಾಮಗಾರಿ ಮಾಡಲು ಸೂಚಿಸಿದರು.

ಈ ಸಂಧರ್ಭದಲ್ಲಿ ಗ್ರಾಮದ ಸದಸ್ಯರಾದ ಗೋಸಿ ಗಾಳೆಪ್ಪ, ಮಲ್ಲೇಶಿ, ರಾಮ ಇತರರಿದ್ದರು.

ಬಾಕ್ಸ್:-

ಕಟ್ಟಡ ಕಾಮಗಾರಿ ವೀಕ್ಷಿಸಿದ್ದು . ಹೆಚ್ಚಿನ ಮಾಹಿತಿ ಪಡೆಯಲಾಗಿದೆ. ಸದ್ಯ ಕಟ್ಟಡಕ್ಕೆ ಪ್ಲಾಸ್ಟಿಂಗ್ ಮಾಡದೆ 21 ದಿನಗಳ ಕಾಲ ಬೆಳೆಗ್ಗೆ, ಮಧ್ಯಾಹ್ನ, ಮತ್ತು ಸಾಯಂಕಾಲ ನಿರಂತರ ನೀರು ಹಾಕಿ ಕ್ಯೂರಿಂಗ್ ಮಾಡಲು ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ನೀರು ಹಾಕಲು ನೇಮಿಸಿದ್ದ ವೃದ್ಧನನ್ನು ಮತ್ತು ಇತರೆ ಕೆಲಸಗಾರರನ್ನು ಬದಲಾಯಿಸಲು ತಿಳಿಸಲಾಗಿದೆ. ಕಟ್ಟಡದ ಗುಣಮಟ್ಟ ಪರಿಶೀಲನೆಗಾಗಿ ಸೋಮವಾರ ಅಥವಾ ಮಂಗಳವಾರ ರಂದು ಮೂರನೇ ವ್ಯಕ್ತಿಯ ತಪಾಸಣೆಗೆ ಕಳುಹಿಸಿ ಕೊಡಲಾಗುವುದು. ಲೋಪ ಕಂಡು ಬಂದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು. ಸಾಯಿಬಣ್ಣ, ಜಿಲ್ಲಾ ಪಂಚಾಯತ ಕಾರ್ಯನಿರ್ವಾಹಕ ಇಂಜಿನಿಯರ್.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಮಾಲತೇಶ್.ಶೆಟ್ಟರ್.ಹೊಸಪೇಟೆ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button