ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ.

ನರೇಗಲ್ ನ.17

ಮಕ್ಕಳ ಪ್ರತಿಭೆ ಗುರುತಿಸಿ ಅವರಿಗೆ ಸೂಕ್ತ ಮಾರ್ಗದರ್ಶನ ಹಾಗೂ ತರಬೇತಿ ನೀಡಿ ಪ್ರೋತ್ಸಾಹಿಸಬೇಕು ಎಂದು ಎಸ್‌.ಎ.ವಿ.ವಿ.ಪಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರವೀಂದ್ರನಾಥ ದೊಡ್ಡಮೇಟಿ ಹೇಳಿದರು. ಗದಗ ಜಿಲ್ಲಾ ಪಂಚಾಯಿತಿ, ರೋಣ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಪಟ್ಟಣದ ಎಸ್.ಎ.ವಿ.ವಿ ಸಮಿತಿಯ ವಿದ್ಯಾ ಸಂಸ್ಥೆಯಲ್ಲಿ ಶುಕ್ರವಾರ ಆಯೋಜಿಸಿದ್ದ 2024-25 ನೇ. ಸಾಲಿನ ನರೇಗಲ್ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮೀಣ ಮಕ್ಕಳಲ್ಲಿ ಪ್ರತಿಭೆ ಇದ್ದು ಸೂಕ್ತ ವೇದಿಕೆ ಇಲ್ಲದೇ ಇರುವುದರಿಂದ ಹಿನ್ನೆಡೆ ಅನುಭಸುತ್ತಿದ್ದರು. ಪ್ರತಿಭಾ ಕಾರಂಜಿ, ಕಲಿಕೋತ್ಸವ ಹಳ್ಳಿಗಳಿಂದ ಬರುವ ವಿದ್ಯಾರ್ಥಿಗಳಿಗೆ ವರದಾನವಾಗಿದೆ. ಶಿಕ್ಷಕರ ವೃತ್ತಿ ಅತ್ಯಂತ ಪವಿತ್ರವಾದುದು. ಅದಕ್ಕೆ ನ್ಯಾಯ ದೊರಕಿಸಿ ಕೊಟ್ಟಾಗ ಉತ್ತಮ ಪ್ರತಿಭೆಗಳು ಹೊರ ಬರಲು ಸಾಧ್ಯ ಎಂದರು. ಕೆ.ವಿ.ಬಿ.ಎಂ ಉಚಿತ ಪ್ರಸಾದ ನಿಲಯದ ಚೇರಮನ್ ಮಲ್ಲಿಕಾರ್ಜುನಪ್ಪ ಮೆಣಸಗಿ, ಎಸ್. ಎ. ಬಾಲಕಿಯರ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಎಸ್. ಎನ್. ಹೂಲಗೇರಿ, ಎಸ್. ಎ. ಬಾಲಕರ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಎಂ.ಬಿ ಸಜ್ಜನರ, ಬಸವೇಶ್ವರ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಬಿ. ಜಿ ಶಿರ್ಸಿ, ಎಸ್‌.ಎ.ವಿ.ವಿ.ಪಿ ಸಮಿತಿಯ ಆಡಳಿತ ಮಂಡಳಿ ಸದಸ್ಯ ನಿಂಗನಗೌಡ್ರ ಲಕ್ಕನಗೌಡ್ರ, ನರೇಗಲ್ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಜ್ಯೋತಿ ಬೇಲೇರಿ ಇದ್ದರು. ನರೇಗಲ್ ಪಟ್ಟಣದಲ್ಲಿ ನಡೆದ 2024-25 ನೇ. ಸಾಲಿನ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧಾ ಕಾರ್ಯಕ್ರಮದಲ್ಲಿ ರವೀಂದ್ರನಾಥ ದೊಡ್ಡಮೇಟಿ ಮಾತನಾಡಿದರು.

ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಶಿವಾನಂದ.ಎಫ್. ಗೋಗೇರಿ.ತೋಟಗುಂಟಿ.ಗದಗ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button