ಸರ್ಕಾರಿ ಆಸ್ಪತ್ರೆಯಲ್ಲಿ ಕನಕದಾಸರ ಜಯಂತಿ ಆಚರಣೆ.

ಸಿಂದಗಿ ನ.18

ಸಿಂದಗಿ ಪಟ್ಟಣದ ತಾಲೂಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಶ್ರೀ ಕನಕದಾಸರ ಜಯಂತೋತ್ಸವವನ್ನು ಆಚರಿಸಿದರು, ಈ ಸಂದರ್ಭದಲ್ಲಿ ಪ್ರಯೋಗಾಲಯ ತಾಂತ್ರಿಕ ಅಧಿಕಾರಿಗಳಾದ ರಾಜಶೇಖರ್ ನರಗೋಧಿ ಮಾತನಾಡಿ ದಾಸರಳ್ಳಿ ಶ್ರೇಷ್ಠ ದಾಸ ಕನಕದಾಸರ ಕೀರ್ತನೆ ಮತ್ತು ಅವರ ಸಾಹಿತ್ಯಗಳು ಮೂಡನಂಬಿಕೆ ಕಂದಾಚಾರ ಆಡಂಬರದ ಆಚರಣೆ ಇವುಗಳಿಗೆ ಚಾಟಿ ಏಟು ಕೊಟ್ಟಂತೆ ಕನಕದಾಸರ ಸಾಹಿತ್ಯ ಮನದ ಮೈಲಿಗೆಯನ್ನು ತೊಳೆಯುತ್ತದೆ ಎಂದರೆ ತಪ್ಪಾಗಲಿಕ್ಕಿಲ್ಲ ಹೀಗೆ ನೋಡುತ್ತಾ ಹೋದರೆ ಕನಕದಾಸರ ಮೊದಲ ಹೆಸರು ತಿಮ್ಮಪ್ಪ ನಂತರ ತಿಮ್ಮಪ್ಪ ನಾಯಕ ನಂತರ ಕನಕನಾಯಕ ನಂತರ ಕನಕದಾಸರಾಗಿ ಮಾರ್ಪಟ್ಟಿದ್ದರು. ಹೀಗೆ ಕನಕದಾಸರ ಜೀವನ ಚರಿತ್ರೆಯನ್ನು ಸಂಪೂರ್ಣವಾಗಿ ಮಾಹಿತಿ ನೀಡುವುದರ ಜೊತೆಗೆ ಕೆಲವು ನಡೆದ ಘಟನೆಗಳನ್ನು ವಿಸ್ತರಿಸಿದ್ದರು. ಕನಕದಾಸರು ವ್ಯಾಸರಾಯರ ಮೆಚ್ಚಿನ ಶಿಷ್ಯರು. ವ್ಯಾಸರಾಯದಿಂದ ಮಧ್ವ ತತ್ವಶಾಸ್ತ್ರವನ್ನು ಕಲಿತು ಒಪ್ಪಿಕೊಂಡ ಕನಕದಾಸರು ಉಡುಪಿ ಶ್ರೀ ಕೃಷ್ಣನ ಅನನ್ಯ ಭಕ್ತರು. ಕಾಗಿನೆಲೆಯ ಆದಿಕೇಶವನ ಭಕ್ತರಾದ ಕನಕದಾಸರು ಜಾತಿ ಪದ್ಧತಿಯ ತಾರತಮ್ಯಗಳನ್ನು ಅಲ್ಲಗಳೆದರು. ಇವರ ಕೀರ್ತನೆಗಳ ಅಂಕಿತ ಕಾಗಿನೆಲೆಯ ಆದಿಕೇಶವರಾಯ.

ಈಗಲೂ ಸಹ ಈ ಕಿಂಡಿಯನ್ನು ಕನಕನ ಕಿಂಡಿ ಎಂದು ಕರೆಯುತ್ತಾರೆ.ಅನೇಕರ ನಂಬಿಕೆಯಂತೆ ಉಡುಪಿಯ ದೇವಸ್ಥಾನದಲ್ಲಿ ಅವರಿಗೆ ಪ್ರವೇಶ ದೊರೆಯದೆ ಹೋದಾಗ ದೇವಸ್ಥಾನದ ಹಿಂದೆ ನಿಂತು ಹಾಡ ತೊಡಗಿದರಂತೆ ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ. ಆಗ ಹಿಂಭಾಗದ ಗೋಡೆ ಒಡೆದು ಕೃಷ್ಣನ ವಿಗ್ರಹ ಹಿಮ್ಮುಖವಾಗಿ ತಿರುಗಿತಂತೆ. ಈಗಲೂ ಉಡುಪಿ ಕೃಷ್ಣನ ದೇವಸ್ಥಾನದ ಹಿಂದುಗಡೆಯ ಗೋಡೆಯಲ್ಲಿರುವ ಕಿಂಡಿಯಲ್ಲಿ ಶ್ರೀಕೃಷ್ಣನ ಕಾಣಬಹುದು. ಇಲ್ಲಿ ಒಂದು ಕಿಟಕಿಯನ್ನು ನಿರ್ಮಿಸಿ ಅದನ್ನು ‘ಕನಕನ ಕಿಂಡಿ’ ಎಂದು ಕರೆಯಲಾಗಿದೆ ಮತ್ತು ನಾನು ಹೋದರೆ ಹೋದೆನು ಸ್ವರ್ಗಕ್ಕೆ ಎಂಬುವ ಚಿಂತನೆಯು ಕೂಡ. ನಡೆದ ಘಟನೆ ಬಗ್ಗೆ ಸವಿಸ್ತಾರವಾಗಿ ಇದೆ ಸಂದರ್ಭದಲ್ಲಿ ಮಾತನಾಡಿದರು. ಮತ್ತು ಆಯುಷ್ ವೈದ್ಯಾಧಿಕಾರಿಗಳಾದ ಡಾಕ್ಟರ್, ಮಾಂತೇಶ್ ಹಿರೇಮಠ್ ಇವರು ಕೂಡ ಈ ಸಂದರ್ಭದಲ್ಲಿ ಮಾತನಾಡಿದರು. ಕಾರ್ಯಕ್ರಮದಲ್ಲಿ ತಾಲೂಕ ಆಸ್ಪತ್ರೆ ಎಲ್ಲಾ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂಎಸ್.ಕೆ ನ್ಯೂಸ್ ಕನ್ನಡ ಚಾನಲ್: ಭೀಮಪ್ಪ.ಹಚ್ಯಾಳ.ದೇವರ ಹಿಪ್ಪರಗಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button