ಲೋಕೋಪಯೋಗಿ ಇಲಾಖೆ ಎ.ಇ.ಇ – ಸಾಮುವೇಲಪ್ಪರ ನಿರ್ಲಕ್ಷ್ಯವೇ ಕಾರಣ.
ಮಾನ್ವಿ ನ.19

ಎಸ್ಸಿ/ಎಸ್ಟಿ ಅನುದಾನ ದುರ್ಬಳಕೆ ಯಾಗುವುದಲ್ಲದೆ ಲೋಕೋಪಯೋಗಿ ಇಲಾಖೆ ಮಾನ್ವಿ ಅಭಿಯಂತರರು ರಾತ್ರೋ ರಾತ್ರಿ ಗುಣಮಟ್ಟ ದಲ್ಲಿರುವ ರಸ್ತೆಗೆ ಯಾಕೆ ಕಾಂಕ್ರೀಟ್ ಕಾಮಗಾರಿ ಮಾಡಿ ಹಣ ದುರ್ಬಳಕೆ ಮಾಡಿ ಕೊಳ್ಳುತ್ತೀರಾ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಲು ಬಂದಾಗ ಕೈ ಕಾರ್ಯಕರ್ತರು ಹಾಗೂ ಬಿಜೆಪಿ ಮುಖಂಡರ ನಡುವೆ ಕೈ ಕೈ ಮಿಲಾಯಿಸುವ ವಾಗ್ವಾದ ನಡೆದ ಘಟನೆ ಜರುಗಿತು. ರಾಜ್ಯ ಸರಕಾರ ಅಭಿವೃದ್ಧಿ ಮಾಡುವುದನ್ನು ಸಹಿಸದೆ ಬಿಜೆಪಿ ಕಾರ್ಯಕರ್ತರು ಅಡ್ಡಿ ಪಡಿಸುತ್ತಿದ್ದಾರೆಂದು ಆರೋಪಿಸಿದರು.
ಎಸ್ಸಿ/ಎಸ್ಟಿ ಅನುದಾನವನ್ನು ಲೋಕೋಪಯೋಗಿ ಇಲಾಖೆ ಅಭಿಯಂತರರಾದ ಸಾಮುವೇಲಪ್ಪ ಹಾಗೂ ಗುತ್ತಿಗೆದಾರ ವೆಂಕೋಬ ಒಡೆಯರ್ ಸೇರಿಕೊಂಡು ಗುಣಮಟ್ಟದ ರಸ್ತೆಗೆ ಕಾಂಕ್ರೀಟ್ ಹಾಕಿ ಹಣ ಗುಳುಂ ಮಾಡುವ ವ್ಯವಸ್ಥೆ ಎಂದು ಬಿಜೆಪಿ ಕಾರ್ಯಕರ್ತರು ರಾತ್ರೋ ರಾತ್ರಿ ಕೆಲಸ ಯಾಕೆ ಮಾಡುತ್ತೀರಾ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಹಿನ್ನೆಲೆಯಲ್ಲಿ ಮಾನ್ವಿ ಪೊಲೀಸ್ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಗಲಾಟೆಯನ್ನು ತಿಳಿ ಗೊಳಿಸಿದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್. ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ